‘ಕಾಮಿಡಿ ಕಿಂಗ್‌’ ಸಾಧುಕೋಕಿಲ ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? – ಸಾಧು ಮಹಾರಾಜ್‌ ಅದೆಷ್ಟು ದುಬಾರಿ ಗೊತ್ತಾ…!?

‘ಕಾಮಿಡಿ ಕಿಂಗ್‌’ ಸಾಧುಕೋಕಿಲ ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? – ಸಾಧು ಮಹಾರಾಜ್‌ ಅದೆಷ್ಟು ದುಬಾರಿ ಗೊತ್ತಾ…!?

ನ್ಯೂಸ್‌ ಆ್ಯರೋ : ಸ್ಯಾಂಡಲ್‌ವುಡ್‌ನ ‘ಕಾಮಿಡಿ ಕಿಂಗ್‌’ ಸಾಧುಕೋಕಿಲ ಅವರು ಕಲಾವಿದನಾಗಿ ಮಾತ್ರವಲ್ಲದೆ ಸಂಗೀತ ನಿರ್ದೇಶಕನಾಗಿಯೂ ದೊಡ್ಡ ಮಟ್ಟದ ಹೆಸರನ್ನು ಗಳಿಸಿದ್ದಾರೆ. ಕನ್ನಡ ಚಿತ್ರರಂಗದ ವಿಶೇಷ ಪ್ರತಿಭೆಗಳಲ್ಲಿ ಅವರೂ ಮೊದಲಿಗರಾಗಿ ಕಾಣಿಸಿಕೊಳ್ಳುತ್ತಾರೆ.

ಸಂಗೀತ ವಾದ್ಯಗಳನ್ನು ಅತ್ಯಂತ ವೇಗವಾಗಿ ನುಡಿಸುವಂತಹ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಹಾಸ್ಯ ಕಲಾವಿದನಾಗಿ ಮಾತ್ರವಲ್ಲದೆ ಸಂಗೀತ ಕ್ಷೇತ್ರದಲ್ಲೂ ಆಗಾಗ ಕಮಾಲ್‌ ಮಾಡಿದ್ದಾರೆ. ಇಷ್ಟೆಲ್ಲ ಟ್ಯಾಲೆಂಟ್‌ ಇರುವ ಸಾಧುಕೋಕಿಲ ಚಿತ್ರವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಕಲಾವಿದನಾಗಿ ಮಿಂಚಿರುವ ಸಾಧುಕೋಕಿಲ ಅವರು ಇಂದಿಗೂ ಬೇಡಿಕೆಯ ನಟ. ಸಾಕಷ್ಟು ಹಾಸ್ಯ ಕಲಾವಿದರು ಬಂದು ಮಿಂಚಿ ಮರೆಯಾಗಿದ್ದಾರೆ. ಆದರೆ ಸಾಧುಕೋಕಿಲ ಅವರ ಕಾಮಿಡಿ ಬೇಡಿಕೆಯನ್ನು ಇನ್ನೂ ಉಳಿಸಿಕೊಂಡಿದ್ದಾರೆ.

ಇಷ್ಟೆಲ್ಲ ಬೇಡಿಕೆಯ ಕಲಾವಿದನಾಗಿರುವ ಸಾಧುಕೋಕಿಲ ಅವರು ದಿನವೊಂದಕ್ಕೆ ಪಡೆಯುವ ಸಂಭಾವನೆ ಬಗ್ಗೆ ಕೇಳಿದರೆ ಖಂಡಿತವಾಗಿ ಆಶ್ಚರ್ಯವಾಗುತ್ತದೆ. ಸಾಧುಕೋಕಿಲ ಅವರು ಪ್ರತಿ ದಿನದ ಚಿತ್ರೀಕರಣಕ್ಕೆ ₹2ರಿಂದ ₹ 3.5 ಲಕ್ಷ ರೂಪಾಯಿ ಸಂಭಾವನೆಯನ್ನು ಪಡೆದುಕೊಳ್ಳುತ್ತಾರಂತೆ.

ಸಿನಿಮಾದಲ್ಲಿ ಕೂಡ ಅವರ ಕಾಮಿಡಿಯನ್ನು ನೋಡಲೆಂದೇ ಸಾವಿರಾರು ಅಭಿಮಾನಿಗಳು ಚಿತ್ರಮಂದಿರಗಳಿಗೆ ಬರುತ್ತಾರೆ. ಅವರ ಪಂಚಿಂಗ್‌ ಡೈಲಾಗ್‌ ಕೇಳಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *