‘ಕಾಮಿಡಿ ಕಿಂಗ್‌’ ಸಾಧುಕೋಕಿಲ ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? – ಸಾಧು ಮಹಾರಾಜ್‌ ಅದೆಷ್ಟು ದುಬಾರಿ ಗೊತ್ತಾ…!?

‘ಕಾಮಿಡಿ ಕಿಂಗ್‌’ ಸಾಧುಕೋಕಿಲ ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? – ಸಾಧು ಮಹಾರಾಜ್‌ ಅದೆಷ್ಟು ದುಬಾರಿ ಗೊತ್ತಾ…!?

ನ್ಯೂಸ್‌ ಆ್ಯರೋ : ಸ್ಯಾಂಡಲ್‌ವುಡ್‌ನ ‘ಕಾಮಿಡಿ ಕಿಂಗ್‌’ ಸಾಧುಕೋಕಿಲ ಅವರು ಕಲಾವಿದನಾಗಿ ಮಾತ್ರವಲ್ಲದೆ ಸಂಗೀತ ನಿರ್ದೇಶಕನಾಗಿಯೂ ದೊಡ್ಡ ಮಟ್ಟದ ಹೆಸರನ್ನು ಗಳಿಸಿದ್ದಾರೆ. ಕನ್ನಡ ಚಿತ್ರರಂಗದ ವಿಶೇಷ ಪ್ರತಿಭೆಗಳಲ್ಲಿ ಅವರೂ ಮೊದಲಿಗರಾಗಿ ಕಾಣಿಸಿಕೊಳ್ಳುತ್ತಾರೆ.

ಸಂಗೀತ ವಾದ್ಯಗಳನ್ನು ಅತ್ಯಂತ ವೇಗವಾಗಿ ನುಡಿಸುವಂತಹ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಹಾಸ್ಯ ಕಲಾವಿದನಾಗಿ ಮಾತ್ರವಲ್ಲದೆ ಸಂಗೀತ ಕ್ಷೇತ್ರದಲ್ಲೂ ಆಗಾಗ ಕಮಾಲ್‌ ಮಾಡಿದ್ದಾರೆ. ಇಷ್ಟೆಲ್ಲ ಟ್ಯಾಲೆಂಟ್‌ ಇರುವ ಸಾಧುಕೋಕಿಲ ಚಿತ್ರವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಕಲಾವಿದನಾಗಿ ಮಿಂಚಿರುವ ಸಾಧುಕೋಕಿಲ ಅವರು ಇಂದಿಗೂ ಬೇಡಿಕೆಯ ನಟ. ಸಾಕಷ್ಟು ಹಾಸ್ಯ ಕಲಾವಿದರು ಬಂದು ಮಿಂಚಿ ಮರೆಯಾಗಿದ್ದಾರೆ. ಆದರೆ ಸಾಧುಕೋಕಿಲ ಅವರ ಕಾಮಿಡಿ ಬೇಡಿಕೆಯನ್ನು ಇನ್ನೂ ಉಳಿಸಿಕೊಂಡಿದ್ದಾರೆ.

ಇಷ್ಟೆಲ್ಲ ಬೇಡಿಕೆಯ ಕಲಾವಿದನಾಗಿರುವ ಸಾಧುಕೋಕಿಲ ಅವರು ದಿನವೊಂದಕ್ಕೆ ಪಡೆಯುವ ಸಂಭಾವನೆ ಬಗ್ಗೆ ಕೇಳಿದರೆ ಖಂಡಿತವಾಗಿ ಆಶ್ಚರ್ಯವಾಗುತ್ತದೆ. ಸಾಧುಕೋಕಿಲ ಅವರು ಪ್ರತಿ ದಿನದ ಚಿತ್ರೀಕರಣಕ್ಕೆ ₹2ರಿಂದ ₹ 3.5 ಲಕ್ಷ ರೂಪಾಯಿ ಸಂಭಾವನೆಯನ್ನು ಪಡೆದುಕೊಳ್ಳುತ್ತಾರಂತೆ.

ಸಿನಿಮಾದಲ್ಲಿ ಕೂಡ ಅವರ ಕಾಮಿಡಿಯನ್ನು ನೋಡಲೆಂದೇ ಸಾವಿರಾರು ಅಭಿಮಾನಿಗಳು ಚಿತ್ರಮಂದಿರಗಳಿಗೆ ಬರುತ್ತಾರೆ. ಅವರ ಪಂಚಿಂಗ್‌ ಡೈಲಾಗ್‌ ಕೇಳಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *