‘ಪ್ಲೀಸ್ ನನ್ನನ್ನು ಹೀಗೆ ಕರೀಬೇಡಿ, ಮುಜುಗುರವಾಗುತ್ತೆ’ – ನಟಿ ನಯನತಾರಾ ಹೀಗೆ ಹೇಳಿದ್ಯಾಕೆ…!?

‘ಪ್ಲೀಸ್ ನನ್ನನ್ನು ಹೀಗೆ ಕರೀಬೇಡಿ, ಮುಜುಗುರವಾಗುತ್ತೆ’ – ನಟಿ ನಯನತಾರಾ ಹೀಗೆ ಹೇಳಿದ್ಯಾಕೆ…!?

ನ್ಯೂಸ್ ಆ್ಯರೋ : ನಟಿ ನಯನತಾರಾ ಎಲ್ಲರಿಗೂ ಚಿರಪರಿಚಿತ. ಲೇಡಿ ಸೂಪರ್ ಸ್ಟಾರ್ ಎಂದೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡವರು. ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾ ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿಯಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಬಾಲಿವುಡ್‌ಗೂ ಕಾಲಿಟ್ಟಿರುವ ನಯನತಾರಾಗೆ ಡಿಮ್ಯಾಂಡ್ ಹೆಚ್ಚಿದೆ.

ಜವಾನ್ ಸಿನಿಮಾ ಸಕಸ್ಸ್ ಖುಷಿಯಲ್ಲಿರುವ ನಟಿ ನಯನತಾರಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಅಭಿಮಾನಿಗಳು ಹೆಚ್ಚಾಗಿದ್ದಾರೆ. ದಕ್ಷಿಣ ಭಾರತದ ಅನೇಕ ಸ್ಟಾರ್ ಹೀರೋಗಳಿಗೆ ನಯನತಾರಾ ಲಕ್ಕಿ ಹೀರೋಯಿನ್ ಆಗಿದ್ದಾರೆ. ಕಿಂಗ್ ಖಾನ್ ಶಾರುಖ್ ಜೊತೆ ಜವಾನ್ ಸಿನಿಮಾ ಮೂಲಕ ನಯನತಾರಾ ಬಾಲಿವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ಲೇಡಿ ಸೂಪರ್ ಸ್ಟಾರ್ ಹವಾ ಮತ್ತಷ್ಟು ಹೆಚ್ಚಿದೆ.

‘ಲೇಡಿ ಸೂಪರ್ ಸ್ಟಾರ್’ ಬಿರುದು ನಯನತಾರಾಗೆ ಇಷ್ಟವಿಲ್ಲವಂತೆ…!

ನಯನತಾರಾ ಅವರನ್ನು ಫ್ಯಾನ್ಸ್‌ ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುತ್ತಾರೆ. ಈ ರೀತಿ ಕರೆಸಿಕೊಳ್ಳಲು ನಟಿಯರು ಕಾಯುತ್ತಿರುತ್ತಾರೆ. ಆದ್ರೆ ಅದ್ಯಾಕೋ ನಯನತಾರಾ ಮಾತ್ರ ನನ್ನನ್ನು ಲೇಡಿ ಸೂಪರ್ ಸ್ಟಾರ್ ಎಂದು ಕರೀಬೇಡ್ರಪ್ಪಾ ಎಂದಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ನಯನತಾರಾ ದಯವಿಟ್ಟು ನನ್ನನ್ನು ಲೇಡಿ ಸೂಪರ್‌ ಸ್ಟಾರ್ ಅಂತ ಕರೀಬೇಡಿ ನನಗೆ ಕೊಂಚ ಮುಜುಗರವಾಗುತ್ತದೆ ಎಂದು ಹೇಳಿದ್ದಾರೆ.

ಜವಾನ್ ಸಿನಿಮಾ ಬಳಿಕ ನಟಿ ನಯನತಾರಾ ಅಭಿನಯದ ‘ಅನ್ನಪೂರ್ಣಿ’ ಸಿನಿಮಾ ಡಿಸೆಂಬರ್ 1 ರಂದು ರಿಲೀಸ್ ಆಗಿತ್ತು. ನೀಲೇಶ್ ಕೃಷ್ಣ ನಿರ್ದೇಶನದ ಈ ಸಿನಿಮಾ ಹೇಳಿಕೊಳ್ಳುವ ಯಶಸ್ಸು ನೀಡಲಿಲ್ಲ.

ಸದ್ಯ ನಟಿ ನಯನತಾರಾ ಕಾಲಿವುಡ್ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮದುವೆಯಾಗಿ ಮಕ್ಕಳೊಂದಿಗೆ ಹ್ಯಾಪಿಯಾಗಿದ್ದಾರೆ. ನಯನತಾರಾ ಹಾಗೂ ವಿಘ್ನೇಶ್ ದಂಪತಿಯ ಅವಳಿ ಮಕ್ಕಳಿಗೆ ಪೋಷಕರಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *