ಕೊಪ್ಪದ ಕಾಡಿನಲ್ಲಿ ಮೂವರು ಮುಸ್ಲಿಂ ಯುವಕರ ಜೊತೆ ಹಿಂದೂ ವಿದ್ಯಾರ್ಥಿನಿ – ವೈರಲ್ ಆದ ಸುದ್ದಿಯ ಬಗ್ಗೆ ಎಸ್ಪಿ ಏನಂದ್ರು? ಘಟನೆ ನಡೆದದ್ದೆಲ್ಲಿ? ಸುದ್ದಿಯ ಅಸಲಿಯತ್ತೇನು?

ಕೊಪ್ಪದ ಕಾಡಿನಲ್ಲಿ ಮೂವರು ಮುಸ್ಲಿಂ ಯುವಕರ ಜೊತೆ ಹಿಂದೂ ವಿದ್ಯಾರ್ಥಿನಿ – ವೈರಲ್ ಆದ ಸುದ್ದಿಯ ಬಗ್ಗೆ ಎಸ್ಪಿ ಏನಂದ್ರು? ಘಟನೆ ನಡೆದದ್ದೆಲ್ಲಿ? ಸುದ್ದಿಯ ಅಸಲಿಯತ್ತೇನು?

ನ್ಯೂಸ್ ಆ್ಯರೋ : ಕಳೆದೆರಡು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಕಳಸದ ಹಾಸ್ಟೆಲ್ ನಲ್ಲಿ ಇದ್ದು ಕಾಲೇಜು ಓದುತ್ತಿದ್ದ ಹಿಂದೂ ಹುಡುಗಿ ಮೂವರು ಮುಸ್ಲಿಂ ಹುಡುಗರೊಂದಿಗೆ ಕೊಪ್ಪದ ಕಾಡಿನಲ್ಲಿ ಪತ್ತೆಯಾಗಿ ಹಿಗ್ಗಾಮುಗ್ಗ ಥಳಿತವಾಗಿದೆ ಎಂಬ ಒಕ್ಕಣೆಯೊಂದಿಗೆ ಸಂದೇಶವೊಂದು ಫೋಟೋ‌ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮಾಟೆ ವಿಕ್ರಮ್ ಸ್ಪಷ್ಟನೆ ನೀಡಿದ್ದಾರೆ.

ವೈರಲ್ ಆದ ಫೋಟೋ ಕೆಲದಿನಗಳ ಹಿಂದಿನ ಘಟನೆಯದ್ದಾಗಿದ್ದು, ಯಾವುದೇ ರೀತಿಯ ಅಸಂಬದ್ಧ ಚಟುವಟಿಕೆಗಳು ಕಂಡುಬಂದಿಲ್ಲ. ನಮ್ಮ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಘಟನೆಯ ಹಿನ್ನೆಲೆ :
ಚಿಕ್ಕಮಗಳೂರು ಜಿಲ್ಲೆಯ, ಕೊಪ್ಪ ತಾಲ್ಲೂಕಿನ ಮಲೆನಾಡು ವ್ಯಾಪ್ತಿಯ ಕಪಿಲಕಟ್ಟೆ ಕುದುರೆಗುಂಡಿ ಗ್ರಾಮದ ಜಲಪಾತದ ಕಡೆ ಕೆಲವು ಹುಡುಗರು ಹಾಗೂ ಹುಡುಗಿಯರು ಪ್ರವಾಸಕ್ಕೆಂದು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಊರಿನ ಗ್ರಾಮಸ್ಥರು ಎಲ್ಲರಿಗೂ ಎಚ್ಚರಿಕೆ ನೀಡಿ, ತಿಳಿಗೊಳಿಸಿ ವಾಪಸ್ ಕಳುಹಿಸಿದ್ದರು.

ಸುದ್ದಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಅಲ್ಲಿ ಸೇರಿದ್ದ ಎಲ್ಲರಿಗೂ ಎಚ್ಚರಿಕೆ, ಸೂಕ್ತ ತಿಳುವಳಿಕೆ ಹಾಗೂ ಬುದ್ಧಿವಾದ ಹೇಳಿ ಯಾರೂ ಕೂಡ ಕಾನೂನಿಗೆ ವಿರುದ್ದವಾಗಿ ನಡೆದುಕೊಳ್ಳದಂತೆ ತಿಳಿಸಿ ಸೂಕ್ತ ಕ್ರಮ ಕೈಗೊಂಡಿರುತ್ತಾರೆ.

ಇದು ಹಳೆಯ ವಿಚಾರವಾಗಿದ್ದು ಸಾಮಾಜಿಕ ಮಾಧ್ಯಮದಲ್ಲಿ ಕೆಲ ಕಿಡಿಗೇಡಿಗಳು ಹಬ್ಬಿಸಿರುವಂತೆ ಯಾವುದೇ ರೀತಿಯ ಗಲಾಟೆ ಅಹಿತಕರ ಘಟನೆಗಳು ಸಂಭವಿಸಿರುವುದಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಕೂಡ ಸಂಬಂಧ ಪಟ್ಟ ಠಾಣೆಯಲ್ಲಿ ದಾಖಲಾಗಿರುವುದಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಈ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಸಾರ್ವಜನಿಕರಲ್ಲಿ ಪೋಲಿಸರು ಮನವಿ ಮಾಡಿದ್ದಾರೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *