ಇ-ಶ್ರಮ್‌ ಕಾರ್ಡ್‌ ಯೋಜನೆಯಿಂದ ಅಸಂಘಟಿತ ಕಾರ್ಮಿಕರಿಗಿದೆ ಹಲವು ಲಾಭ – ಯಾರೆಲ್ಲ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು?ಇಲ್ಲಿದೆ ಮಾಹಿತಿ..

ಇ-ಶ್ರಮ್‌ ಕಾರ್ಡ್‌ ಯೋಜನೆಯಿಂದ ಅಸಂಘಟಿತ ಕಾರ್ಮಿಕರಿಗಿದೆ ಹಲವು ಲಾಭ – ಯಾರೆಲ್ಲ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು?ಇಲ್ಲಿದೆ ಮಾಹಿತಿ..

ನ್ಯೂಸ್ ಆ್ಯರೋ : ಅಸಂಘಟಿತ ವಲಯದ ಕಾರ್ಮಿಕರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆಗಸ್ಟ್ 26ರಂದು ‘ಇ-ಶ್ರಮ್‌ ಪೋರ್ಟಲ್‌ಗೆ ಚಾಲನೆ ನೀಡಿದೆ. ಈಗಾಗಲೇ ಒಂದು ಕೋಟಿಗೂ ಅಧಿಕ ಕಾರ್ಮಿಕರು ಈ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿದ್ದಾರೆ. ಇ-ಶ್ರಮ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ಇ-ಶ್ರಮ್‌ ಕಾರ್ಡ್, ಕೋವಿಡ್ ಪರಿಹಾರ ಯೋಜನೆ, ಅಟಲ್ ವಿಮಾ ಕಲ್ಯಾಣ ಯೋಜನೆಯ ಪ್ರಯೋಜನ ಸಿಗಲಿದೆ.

ಏನಿದು ಇ-ಶ್ರಮ ಪೋರ್ಟಲ್?

ಕಟ್ಟಡ ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಮನೆಗೆಲಸದವರು, ರಸ್ತೆಬದಿ ವ್ಯಾಪಾರಿಗಳು ಸೇರಿದಂತೆ ಅಸಂಘಟಿತ ವಲಯದ 38 ಕೋಟಿ ಕಾರ್ಮಿಕರ ನೋಂದಣಿ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದೇ ಕಾರಣಕ್ಕೆ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಿದ್ದು, ಇದರಲ್ಲಿ ಕಾರ್ಮಿಕರು ತಮ್ಮ ಹೆಸರು ಮತ್ತು ಮಾಹಿತಿ ನೋಂದಾಯಿಸಬಹುದು. ಹೀಗೆ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ವಿಶಿಷ್ಟ ಗುರುತು ಸಂಖ್ಯೆ ಹೊಂದಿರೋ ಇ-ಶ್ರಮ ಕಾರ್ಡ್ ನೀಡಲಾಗುತ್ತದೆ.

ಇ-ಶ್ರಮ ಕಾರ್ಡ್

ಇ-ಶ್ರಮ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ 12 ಅಂಕಿಗಳ ವಿಶಿಷ್ಟ ಗುರುತಿನ ಇ-ಶ್ರಮ್ ಕಾರ್ಡ್ ನೀಡಲಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯಲು ಕಾರ್ಮಿಕರಿಗೆ ಈ ಕಾರ್ಡ್ ನೆರವು ನೀಡಲಿದೆ. ಇದು ಜೀವಿತಾವಧಿ ವ್ಯಾಲಿಡಿಟಿ ಹೊಂದಿದೆ. ಎಲ್ಲ ಯೋಜನೆಗಳ ಪ್ರಯೋಜನ ಪಡೆಯಲು ಇದೊಂದೇ ಕಾರ್ಡ್ ಸಾಕು.

ಯಾರು ಹೆಸರು ನೋಂದಾಯಿಸಬಹುದು?

16 ರಿಂದ 59 ವಯಸ್ಸಿನ ಕಟ್ಟಡ ನಿರ್ಮಾಣ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಕೃಷಿ ಕೂಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರು ಇ-ಶ್ರಮ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬಹುದು.

ಈ ದಾಖಲೆಗಳು ಅಗತ್ಯ

ಹೆಸರು, ಉದ್ಯೋಗ, ಕಾಯಂ ವಿಳಾಸ, ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವದ ಮಾಹಿತಿ, ಕುಟುಂಬ ಸದಸ್ಯರ ಮಾಹಿತಿ, ಆಧಾರ್ ಸಂಖ್ಯೆ, ಆಧಾರ್ ಸಂಖ್ಯೆಗೆ ಜೋಡಣೆಯಾಗಿರೋ ಮೊಬೈಲ್ ನಂಬ್ರ, ಬ್ಯಾಂಕ್ ಖಾತೆ ಸಂಖ್ಯೆ, ಐಎಫ್ಎಸ್ಸಿ ಕೋಡ್ ಮಾಹಿತಿಗಳಿಗೆ ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿರಬೇಕು.

ಪ್ರಯೋಜನಗಳೇನು?

ನೋಂದಾಯಿತ ಕಾರ್ಮಿಕರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ಬಿವೈ) ಅಡಿಯಲ್ಲಿ 2 ಲಕ್ಷ ರೂ. ಅಪಘಾತ ವಿಮಾ ಕವರೇಜ್ ಪಡೆಯುತ್ತಾರೆ. ಕಾರ್ಮಿಕ ಆಕಸ್ಮಿಕವಾಗಿ ಮರಣ ಹೊಂದಿದ್ರೆ ಅಥವಾ ಶಾಶ್ವತ ಅಂಗವೈಕಲ್ಯಕ್ಕೊಳಗಾದ್ರೆ 2 ಲಕ್ಷ ರೂ. ಸಿಗಲಿದೆ.

ಅಸಂಘಟಿತ ಕಾರ್ಮಿಕರಿಗೆ ಲಭ್ಯವಿರೋ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯಲು ನೋಂದಾಯಿತ ಕಾರ್ಮಿಕ ಅರ್ಹನಾಗಿದ್ದಾನೆ. ತುರ್ತು ಸಂದರ್ಭ ಹಾಗೂ ರಾಷ್ಟ್ರೀಯ ವಿಪತ್ತಿನ ಸಮಯದಲ್ಲಿ ಇ-ಶ್ರಮ ಕಾರ್ಡ್ ಹೊಂದಿರೋರು ಎಲ್ಲ ರೀತಿಯ ನೆರವನ್ನು ಪಡೆಯಲು ಅರ್ಹರಾಗಿರುತ್ತಾರೆ.

ನೋಂದಣಿ ಹೇಗೆ?

ಕಾರ್ಮಿಕರು https://eshram.gov.in ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕು. ಈ ಪೋರ್ಟಲ್ ಗೆ ಭೇಟಿ ನೀಡಿ ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ಮಾಹಿತಿ ಭರ್ತಿ ಮಾಡಬೇಕು. ನೋಂದಣಿ ಯಶಸ್ವಿಯಾದ್ರೆ ವಿಶಿಷ್ಟ ಸಂಖ್ಯೆ ಹೊಂದಿರೋ ಇ-ಶ್ರಮ ಕಾರ್ಡ್ ನೀಡಲಾಗುತ್ತದೆ. ಕಾರ್ಮಿಕರು ಸ್ವತಃ ನೋಂದಾವಣಿ ಮಾಡಿಕೊಳ್ಳಬಹುದು. ಇಲ್ಲವೆ ಸಾಮಾನ್ಯ ಸೇವಾ ಕೇಂದ್ರಗಳು ಅಥವಾ ಪ್ರಾದೇಶಿಕ ಕಚೇರಿಗಳ ಮೂಲಕ ಕೂಡ ನೋಂದಣಿ ಮಾಡಿಸಬಹುದು. ನೋಂದಣಿಗೆ ಯಾವುದೇ ಶುಲ್ಕ ವಿಧಿಸಿಲ್ಲ.

ನೆರವಿಗೆ ಹೆಲ್ಪ್‌ಲೈನ್‌

ನೋಂದಣಿ ಸಮಯದಲ್ಲಿ ಯಾವುದೇ ಸಮಸ್ಯೆ ಎದುರಾದ್ರೆ 14434 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು. ಹಿಂದಿ, ಇಂಗ್ಲಿಷ್, ತಮಿಳು, ಬೆಂಗಾಲಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ತೆಲುಗು ಹಾಗೂ ಅಸಾಮಿ ಭಾಷೆಗಳಲ್ಲಿ ಹೆಲ್ಪ್‌ ಲೈನ್‌ ಸೌಲಭ್ಯವಿದೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *