ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ – ಖಾತೆಗೆ ಜಮೆಯಾಗಲಿದೆ ಯೋಜನೆಯ ಹಣ, ಜಮೆಯಾಗಲಿರುವ ಮೊತ್ತವೆಷ್ಟು ಗೊತ್ತಾ?

ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ – ಖಾತೆಗೆ ಜಮೆಯಾಗಲಿದೆ ಯೋಜನೆಯ ಹಣ, ಜಮೆಯಾಗಲಿರುವ ಮೊತ್ತವೆಷ್ಟು ಗೊತ್ತಾ?

ನ್ಯೂಸ್ ಆ್ಯರೋ‌ : ಕರ್ನಾಟಕದ ಮಾಜಿ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮೀ ಬಾಂಡ್ ಗೆ ( Bhagyalakshmi scheme ) ಮುಂದಿನ ಮಾರ್ಚ್ ಗೆ 18 ವರ್ಷ ತುಂಬಲಿದೆ. ಈ ಯೋಜನೆಯ ಮೊದಲ ತಂಡದ ಫಲಾನುಭವಿಗಳಿಗೆ ಸಂತಸದ ಸುದ್ದಿ ಎನ್ನುವಂತೆ, ಖಾತೆಗೆ ಹಣ ಜಮೆ ಆಗಲಿದೆ. ಈ ಮೂಲಕ ನಿಮ್ಮ ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಯೋಜನೆಯ ಲಾಭ ಅರ್ಹ ಹಾಗೂ ನಿಯಮ ಪಾಲಿಸಿದ ಫಲಾನುಭವಿಗಳಿಗೆ ಮುಟ್ಟಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ. ಇದು ಹೆತ್ತವರ ಹಾಗೂ ಫಲಾನುಭವಿಗಳ ಮೊಗದಲ್ಲಿ ನಗೆಯನ್ನು ತರಿಸುವಂತೆ ಮಾಡಿದೆ.

ಅಂದಹಾಗೇ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಇಬ್ಬರು ಹೆಣ್ಣುಮಕ್ಕಳಿಗೆ 2006-07ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಜಾರಿಗೊಳಿಸಿತ್ತು.

ಎಲ್‌ಐಸಿ ಜೊತೆಗೆ ಒಪ್ಪಂದ ಮಾಡಿಕೊಂಡು, ಹೆಣ್ಣು ಮಗುವಿನ ಹೆಸರಿನಲ್ಲಿ 10,000 ಠೇವಣಿ ಮಾಡಿಸಿ, ಮಗುವಿಗೆ 18 ವರ್ಷ ತುಂಬಿದಾಗ ಮೆಚ್ಯೂರಿಟಿ ಹಣ ನೀಡುವುದ ಒಪ್ಪಂದದ ಕರಾರು ಆಗಿತ್ತು. ಈ ಯೋಜನೆಯನ್ನು 2020ರ ಏಪ್ರಿನಿಂದ ಜೀವ ವಿಮಾ ನಿಗಮದಿಂದ ಅಂಚೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಈಗ ಅದು ಭಾಗ್ಯಲಕ್ಷ್ಮಿ ಸುಕನ್ಯಾ ಯೋಜನೆ ಎಂದಾಗಿದೆ.

2008ರ ಜುಲೈ ಒಳಗೆ ಜನಿಸಿದ ಹೆಣ್ಣು ಮಗುವಿನ ಹೆಸರಿನಲ್ಲಿ 10 ಸಾವಿರ ರೂ.ಅನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಸರ್ಕಾರ ನಿಶ್ಚಿತ ಠೇವಣಿ ಇಟ್ಟಿದೆ. ಆ ಸಂಸ್ಥೆಯು ಬಡ್ಡಿ ಸಮೇತ 18 ವರ್ಷ ಪೂರ್ಣಗೊಂಡ ಮೊದಲನೇ ಮಗುವಿಗೆ ರೂ.34,751 ಹಾಗೂ 2ನೇ ಮಗುವಿಗೆ ರೂ.40,619 ಜಮಾ ಆಗಲಿದೆ.

2008ರ ಆಗಸ್ಟ್ ನಂತ್ರ ಜನಿಸಿದ ಮಗುವಿನ ಠೇವಣಿ ಮತ್ತ ರೂ.19,300ಗೆ ಹೆಚ್ಚಿಸಲಾಗಿದೆ. ಹೀಗಾಗಿ ಮೊದಲ ಹೆಣ್ಣುಮಗಿವಿಗೆ ರೂ.1,00,052 ಹಾಗೂ 2ನೇ ಮಗುವಿಗೆ ರೂ.18,350 ಠೇವಣಿಯಿಂದ ರೂ.1,00,097 ದೊರೆಯಲಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *