ಪಡಿತರ ಚೀಟಿ ತಿದ್ದುಪಡಿಯ ಅವಧಿ ಬಗ್ಗೆ ಅಧಿಕೃತ ಮಾಹಿತಿ – ತಿದ್ದುಪಡಿ ಆಗದವರು ಈ ಸುದ್ದಿ ಗಮನಿಸಿ

ಪಡಿತರ ಚೀಟಿ ತಿದ್ದುಪಡಿಯ ಅವಧಿ ಬಗ್ಗೆ ಅಧಿಕೃತ ಮಾಹಿತಿ – ತಿದ್ದುಪಡಿ ಆಗದವರು ಈ ಸುದ್ದಿ ಗಮನಿಸಿ

ನ್ಯೂಸ್ ಆ್ಯರೋ‌ : ಪಡಿತರ ಚೀಟಿ ಬದಲಾವಣೆ, ತಿದ್ದುಪಡಿಯ ಅವಧಿಯನ್ನು ಇನ್ನಷ್ಟು ದಿನ ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಆಗ್ರಹದ ಮೇರೆಗೆ ಕ್ರಮ

ಈ ಹಿಂದೆ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ವಿಳಾಸ ಬದಲಾವಣೆಗೆ ಆಗಸ್ಟ್ 31ರ ವರೆಗೆ ಗಡುವು ವಿಧಿಸಲಾಗಿತ್ತು. ಇದೀಗ ಗ್ರಾಹಕರ ಆಗ್ರಹದ ಮೇರೆಗೆ ಈ ಅವಧಿಯನ್ನು ಇನ್ನಷ್ಟು ದಿನ ವಿಸ್ತರಿಸಿದ್ದೇವೆ.

ಆನ್ ಲೈನ್ ಮೂಲಕ ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಮಾಡಿಕೊಳ್ಳಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಾರ್ವಜನಿಕ ವಿತರಣೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ತಿಳಿಸಿದರು.

ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಎಪ್ರಿಲ್-ಮೇ ತಿಂಗಳಿನಲ್ಲಿ ಹೊಸದಾಗಿ ಎಪಿಎಲ್, ಬಿಪಿಎಲ್ ಕಾರ್ಡ್ ಮಾಡಿಸುವುದು, ಹೆಸರು ತಿದ್ದುಪಡಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಈಗ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಬಯೋಮೆಟ್ರಿಕ್ಸ್, ಯಜಮಾನನ ಹೆಸರಿನಲ್ಲಿರುವ ಪಡಿತರ ಚೀಟಿ ಯಜಮಾನಿಯ ಹೆಸರಿಗೆ ವರ್ಗಾಯಿಸುವುದು ಸೇರಿದಂತೆ ಕೆಲವು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅದಾಗ್ಯೂ ಹೊಸ ಕಾರ್ಡ್ ಮಾಡಿಸಲು ಇನ್ನೂ ಅವಕಾಶ ನೀಡಿಲ್ಲ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *