ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗಲಿದೆ ಈ ಮಹತ್ವಾಕಾಂಕ್ಷೆಯ ಯೋಜನೆ‌ – ಯಾವ ಯೋಜನೆ? ಲಾಭವೇನು..? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್…

ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗಲಿದೆ ಈ ಮಹತ್ವಾಕಾಂಕ್ಷೆಯ ಯೋಜನೆ‌ – ಯಾವ ಯೋಜನೆ? ಲಾಭವೇನು..? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್…

ನ್ಯೂಸ್ ಆ್ಯರೋ‌ : ಸುಕನ್ಯಾ ಸಮೃದ್ಧಿ ಯೋಜನೆ ಇದು ಭಾರತದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸುಕನ್ಯಾ ಸಮೃದ್ಧಿ ಖಾತೆ ತೆರೆಯುವುದು ಅತ್ಯಂತ ಸುಲಭದ ಕೆಲಸ. ಇದು ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಉಳಿತಾಯ ಯೋಜನೆ ಕೂಡ. ಹೆಣ್ಣು ಮಗುವಿನ ಉನ್ನತ ವಿದ್ಯಾಭ್ಯಾಸ, ಮದುವೆ ಖರ್ಚಿಗೆ ಇದು ಅತ್ಯುತ್ತಮ ಹಣ ಉಳಿತಾಯದ ಮಾರ್ಗವಾಗಿದೆ. ಈ ಖಾತೆ ತೆರೆಯಲು ಪೋಷಕರು ಮಾಡಬೇಕಿರುವುದು ಏನು? ಅದಕ್ಕೆ ನೀಡಬೇಕಿರುವ ಕಡ್ಡಾಯ ದಾಖಲೆಗಳು ಯಾವುದು? ಪುರಾವೆಗಳನ್ನು ಸಲ್ಲಿಸುವುದು ಹೇಗೆ? ಮೊದಲಾದ ಪೂರ್ಣ ಮಾಹಿತಿ ಇಲ್ಲಿದೆ.

ಕೇಂದ್ರ ಸರಕಾರ ಎಲ್ಲ ಸಣ್ಣ ಉಳಿತಾಯ ಯೋಜನೆಗಳ ಪೈಕಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಅತಿ ಹೆಚ್ಚು ಬಡ್ಡಿ ನೀಡಲಾಗುತ್ತಿದೆ. ಪ್ರಸ್ತುತ ವಾರ್ಷಿಕ ಶೇ.7.6 ರಷ್ಟು ಬಡ್ಡಿ ನೀಡಲಾಗುತ್ತಿದೆ. ಕೇಂದ್ರ ಸರಕಾರದ ‘ಬೇಟಿ ಬಚಾವೊ ಬೇಟಿ ಪಡಾವೊ’ ಅಭಿಯಾನದ ಅಂಗವಾಗಿ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್‌ವೈ) ಆರಂಭಿಸಲಾಗಿದೆ. ಇದು ಹೆಣ್ಣು ಮಗುವಿಗಾಗಿ ಇರುವ ಸಣ್ಣ ಉಳಿತಾಯ ಠೇವಣಿ ಯೋಜನೆಯಾಗಿದೆ. ಇದನ್ನು 2015ರ ಜನವರಿ 22ರಂದು ಆರಂಭಿಸಲಾಯಿತು. ಈ ಯೋಜನೆಯಡಿ ಹೂಡಿಕೆ ಮಾಡುವ ಹಣಕ್ಕೆ ತೆರಿಗೆ ವಿನಾಯಿತಿ ಇರುವ ಕಾರಣದಿಂದ ಇದು ಹೆಚ್ಚು ಜನಪ್ರಿಯವಾಗಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿಯಲ್ಲಿ ಗರಿಷ್ಠ1.5 ಲಕ್ಷ ರೂಪಾಯಿವರೆಗೆ ಹೂಡಿಕೆ ಮಾಡಬಹುದು.

ಅರ್ಹತೆಗಳೇನು..?

  • ಹೆಣ್ಣು ಮಕ್ಕಳು ಮಾತ್ರವೇ ಸುಕನ್ಯಾ ಸಮೃದ್ಧಿ ಖಾತೆ ಹೊಂದಲು ಅರ್ಹರಾಗಿರುತ್ತಾರೆ.
  • ಖಾತೆ ತೆರೆಯುವ ಸಮಯದಲ್ಲಿ, ಹೆಣ್ಣು ಮಗುವಿಗೆ 10 ವರ್ಷಕ್ಕಿಂತ ಕಡಿಮೆ ಇರಬೇಕು.
  • ಎಸ್‌ಎಸ್‌ವೈ ಖಾತೆ ತೆರೆಯುವಾಗ, ಹೆಣ್ಣು ಮಗುವಿನ ವಯಸ್ಸಿನ ಪುರಾವೆ (ಜನನ ಪ್ರಮಾಣಪತ್ರ) ಕಡ್ಡಾಯವಾಗಿರಬೇಕು.

ಈ ದಾಖಲೆಗಳು ಅಗತ್ಯ

  • ಆಯಾ ಸರ್ಕಾರಿ ಪೋರ್ಟಲ್‍ನಿಂದ ಫಾರ್ಮ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು.
  • ಫಾರ್ಮ್‌ ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ
  • ಇವುಗಳನ್ನು ಒಳಗೊಂಡಿರುವ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಒಯ್ಯಿರಿ
  • ಹೆಣ್ಣು ಮಗು ಮತ್ತು ಪೋಷಕರು/ಪೋಷಕರು ಒಟ್ಟಿಗೆ ಇರುವ ಛಾಯಾಚಿತ್ರಗಳು
  • ಗುರುತಿನ ಪುರಾವೆ
  • ವಿಳಾಸ ಪುರಾವೆ
  • ಆಧಾರ್ ಕಾರ್ಡ್ ಕಡ್ಡಾಯ
  • ಹೆಣ್ಣು ಮಗುವಿನ ಜನನ ಪ್ರಮಾಣಪತ್ರ

ಖಾತೆ ತೆರೆಯುವುದು ಹೇಗೆ?

ಅಂಚೆ ಕಛೇರಿ ಅಥವಾ ವಾಣಿಜ್ಯ ಬ್ಯಾಂಕುಗಳ ಯಾವುದೇ ಅಧಿಕೃತ ಶಾಖೆಯಲ್ಲಿ ‘ಸುಕನ್ಯಾ ಸಮೃದ್ಧಿ ಯೋಜನೆ’ಯಡಿ ಖಾತೆ ತೆರೆಯಬಹುದು. ಹೆಣ್ಣು ಮಗು ಜನಿಸಿದ 10 ವರ್ಷದೊಳಗೆ ಕನಿಷ್ಠ 250 ರೂಪಾಯಿ ಠೇವಣಿಯೊಂದಿಗೆ ಖಾತೆ ತೆರೆಯಬಹುದು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಗರಿಷ್ಠ 1.5 ಲಕ್ಷ ರೂ. ವರಗೆ ಠೇವಣಿ ಮಾಡಲು ಅವಕಾಶವಿದೆ. ಹಿಂಪಡೆಯುವ ಸಮಯದಲ್ಲಿ ಈ ಖಾತೆಯಲ್ಲಿ ಠೇವಣಿ ಮಾಡಿದ ಹಣಕ್ಕೆ ಶೇ.7.6 ರಷ್ಟು ಬಡ್ಡಿ ಸಿಗಲಿದೆ. ಹುಡುಗಿಗೆ 18 ವರ್ಷ ತುಂಬಿದಾಗ ಭಾಗಶಃ ಹಿಂತೆಗೆದುಕೊಳ್ಳಬಹುದು.

ಸಂಪೂರ್ಣ ಹಣವನ್ನು 21ನೇ ವಯಸ್ಸಿನಲ್ಲಿ ತೆಗೆದುಕೊಳ್ಳಬಹುದು. ಈ ಯೋಜನೆಯು ಭಾರತದ ಆದಾಯ ತೆರಿಗೆ ಕಾಯ್ದೆಯ 80 ಸಿ ಸೆಕ್ಷನ್ ಅಡಿ ಬರುತ್ತದೆ. ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಹಣ ಕಟ್ಟಬಹುದು. ಒಂದು ನಿರ್ದಿಷ್ಟ ವರ್ಷಕ್ಕೆ ಠೇವಣಿ ತಪ್ಪಿಸಿಕೊಂಡರೆ, ಪ್ರತಿ ವರ್ಷ 50 ರೂ. ದಂಡ ಪಾವತಿಸಬೇಕಾಗುತ್ತದೆ.

ಎಷ್ಟು ಮಕ್ಕಳಿಗೆ ಸಿಗಲಿದೆ ಸೌಲಭ್ಯ?

ಸುಕನ್ಯಾ ಸಮೃದ್ಧಿ ಯೋಜನೆಯಡಿ ಪಾಲಕರು ಗರಿಷ್ಠ ಎರಡು ಖಾತೆಗಳನ್ನು ತೆರೆಯಬಹುದು. ಅಂದರೆ, ಪ್ರತಿ ಒಬ್ಬ ಮಗಳಿಗೆ ಒಂದು ಖಾತೆಯಂತೆ ಗರಿಷ್ಠ ಇಬ್ಬರು ಪುತ್ರಿಯರಿಗೆ ಖಾತೆ ತೆರೆಯಬಹುದು. ಒಂದು ವೇಳೆ ಮೊದಲ ಅಥವಾ ಎರಡನೆಯ ಹೆರಿಗೆಯಿಂದ ಅವಳಿ ಹೆಣ್ಣುಮಕ್ಕಳು ಜನಿಸಿದರೆ, ಈ ಯೋಜನೆಯು ಪೋಷಕರಿಗೆ ಮೂರನೇ ಖಾತೆ ತೆರೆಯಲು ಅನುವು ಮಾಡಿಕೊಡಲಾಗುತ್ತದೆ.

ಎಷ್ಟು ಬಡ್ಡಿ ಸಿಗಲಿದೆ?

ಈ ಯೋಜನೆಯಡಿ (ಸುಕನ್ಯಾ ಸಮೃದ್ಧಿ ಖಾತೆ), ನಿಮಗೆ ಶೇಕಡಾ 7.6 ರ ದರದಲ್ಲಿ ಬಡ್ಡಿ ನೀಡಲಾಗುತ್ತಿದೆ. ಇದು ಆದಾಯ ತೆರಿಗೆ ವಿನಾಯಿತಿಯೊಂದಿಗೆ. ಇದಕ್ಕೂ ಮೊದಲು ಶೇ.9.2ರವರೆಗೆ ಬಡ್ಡಿ ನಿಗದಿಯಾಗಿತ್ತು. ಇಷ್ಟೇ ಅಲ್ಲ, 8 ವರ್ಷದ ನಂತರ, ಮಗಳ ಉನ್ನತ ಶಿಕ್ಷಣದ ವೆಚ್ಚದ ವಿಷಯದಲ್ಲಿ ಶೇ.50 ರಷ್ಟು ಹಣವನ್ನು ಹಿಂಪಡೆಯಬಹುದು. ಪ್ರಸ್ತುತ, ಆದಾಯ ತೆರಿಗೆ ವಿನಾಯಿತಿಯೊಂದಿಗೆ ಶೇ.7.6ರ ದರದಲ್ಲಿ SSY ನಲ್ಲಿ ಬಡ್ಡಿ ನೀಡಲಾಗುತ್ತಿದೆ. ನಿಮ್ಮ ಪ್ರೀತಿಯ ಮಗಳ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಇಂದೇ ಈ ಯೋಜನೆಯ ಲಾಭ ಪಡೆದುಕೊಳ್ಳಿ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *