ದಿನಾ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೆನೆಸಿದ ನೀರು ‌ಸೇವಿಸಿ – ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗಗಳಿವೆ ಗೊತ್ತಾ?

ದಿನಾ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೆನೆಸಿದ ನೀರು ‌ಸೇವಿಸಿ – ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗಗಳಿವೆ ಗೊತ್ತಾ?

ನ್ಯೂಸ್ ಆ್ಯರೋ‌ : ಪ್ರಕೃತಿಯಲ್ಲಿ ಸಿಗುವ ಗಿಡಮೂಲಿಕೆಗಳು ಹಾಗೂ ನಾವು ಬಳಸುವಂತಹ ಸಾಂಬಾರ ಪದಾರ್ಥಗಳನ್ನು ಬಳಸಿಕೊಂಡು ಆಯುರ್ವೇದವು ಹಲವಾರು ವಿಧದ ಔಷಧಿಗಳನ್ನು ತಯಾರಿಸುತ್ತದೆ ಮತ್ತು ಇದು ತುಂಬಾ ಪರಿಣಾಮಕಾರಿ ಹಾಗೂ ಯಾವುದೇ ಅಡ್ಡಪರಿಣಾಮಗಳನ್ನು ಉಂಟು ಮಾಡದು. ಆಯುರ್ವೇದದಲ್ಲಿ ಸೂಚಿಸಿರುವಂತಹ ಕೆಲವೊಂದು ವಿಧಾನಗಳನ್ನು ನಾವು ಪಾಲಿಸಿಕೊಂಡು ಹೋದರೆ ಅದು ನಮಗೆ ದಿನನಿತ್ಯದಲ್ಲಿ ಆರೋಗ್ಯ ಕಾಪಾಡಲು ತುಂಬಾ ನೆರವಾಗಲಿದೆ.

ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ರಾತ್ರಿ ವೇಳೆ ನೆನೆಸಿಟ್ಟು ಅದರ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಎಷ್ಟು ಲಾಭವಾಗಲಿದೆ ಎನ್ನುವುದನ್ನು ನಾವು ತಿಳಿದುಕೊಂಡಿದ್ದೇವೆ. ಅದೇ ರೀತಿ ಈಗ ಮೆಂತ್ಯೆ ಕಾಳನ್ನು ನೀರಿನಲ್ಲಿ ನೆನೆಸಿಟ್ಟುಕೊಂಡು ಅದನ್ನು ಕುಡಿದರೆ ಎಷ್ಟು ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೆಂತೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಮೆಂತೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಹಾಗೂ ಖನಿಜಾಂಶಗಳು ಇವೆ. ಇದು ದೇಹದ ಆರೋಗ್ಯವನ್ನು ಕಾಪಾಡುವ ಜತೆಗೆ ಹಲವಾರು ಕಾಯಿಲೆಗಳು ಬರದಂತೆ ತಡೆಯುವುದು.

ತೂಕ ಇಳಿಸಲು, ಯಕೃತ್, ಕಿಡ್ನಿ ಮತ್ತು ಚಯಾಪಚಯಕ್ಕೆ ಇದು ತುಂಬಾ ಒಳ್ಳೆಯದು. ಮೆಂತ್ಯೆಕಾಳಿನ ನೀರಿನಿಂದ ಅದ್ಭುತ ಲಾಭಗಳು ಇವೆ. ಇದನ್ನು ನೀವು ಬಳಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು. ನಿಮ್ಮ ಆಹಾರ ಕ್ರಮದಲ್ಲಿ ಮೊದಲಿಗೆ ಮೆಂತ್ಯೆ ನೀರನ್ನು ಕುಡಿದರೆ ಅದರಿಂದ ಯಾವ ಲಾಭಗಳು ಆಗಲಿದೆ ಎಂದು ತಿಳಿಯಿರಿ.

ಕಫ ಇರುವ ಜನರಿಗೆ ತುಂಬಾ ಒಳ್ಳೆಯದು

ಕಫ ಹೆಚ್ಚಾಗಿ ಇರುವಂತಹ ಜನರ ದೇಹದಲ್ಲಿ ಉಷ್ಣತೆ(ಅಗ್ನಿ)ಯು ಕಡಿಮೆ ಇರುವುದು ಎಂದು ಆಯುರ್ವೇದವು ಹೇಳುತ್ತದೆ.

ಕಫ ಇರುವ ವ್ಯಕ್ತಿಗಳಲ್ಲಿ ಪ್ರತಿರೋಧಕ ಶಕ್ತಿಯು ಕಡಿಮೆ ಇರುವುದು ಮತ್ತು ಇದರಿಂದ ಶೀತ, ಕೆಮ್ಮು ಮತ್ತು ಜ್ವರ ಬರುವುದು. ಮೆಂತ್ಯೆ ನೀರು ಕುಡಿದರೆ ಅದು ದೇಹಕ್ಕೆ ಉಷ್ಣತೆ ನೀಡುವುದು ಹಾಗೂ ದೇಹದ ಪ್ರತಿರೋಧಕ ಶಕ್ತಿ ಕೂಡ ವೃದ್ಧಿಸುವುದು.

ಬಾಣಂತಿಯರ ಆರೋಗ್ಯ ವೃದ್ಧಿಗೂ ಸಹಕಾರಿ

ಮೆಂತ್ಯೆ ನೀರು ಬಾಣಂತಿಯರಿಗೆ ತುಂಬಾ ಒಳ್ಳೆಯದು. ಯಾಕೆಂದರೆ ಇದು ಹಾಲಿನ ಉತ್ಪತ್ತಿ ಹೆಚ್ಚಿಸುವುದು. ಮೆಂತ್ಯೆ ಕಾಳನ್ನು ಮಿತ ಪ್ರಮಾಣದಲ್ಲಿ ಬಳಕೆ ಮಾಡಿದರೆ ಅದರಿಂದ ವಿವಿಧ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬಹುದಾಗಿದೆ.

ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿಯರಿಗೆ ಮೆಂತ್ಯೆ ಕಾಳು ತುಂಬಾ ಲಾಭಕಾರಿ. ಇದರಿಂದಾಗಿ ಬಾಣಂತಿಯರಿಗೆ ಮೆಂತ್ಯೆ ಕಾಳಿನಿಂದ ತಯಾರಿಸಿದ ಲಾಡು ನೀಡಲಾಗುತ್ತದೆ.

ಮೆಂತ್ಯೆಯಲ್ಲಿರುವಂತಹ ಕೆಲವೊಂದು ಅಂಶಗಳು ಗರ್ಭಕೋಶವನ್ನು ಮೊದಲಿನ ಸ್ಥಿತಿಗೆ ತರಲು ನೆರವಾಗುವುದು. ಇದರಿಂದ ಮೆಂತ್ಯೆ ನೀರನ್ನು ಬಳಸಬಹುದು.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಕಾರಿ

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಮೆಂತ್ಯೆ ಕಾಳು ತುಂಬಾ ಪರಿಣಾಮಕಾರಿ ಆಗಿರುವುದು. ಇದು ಇನ್ಸುಲಿನ್ ಪ್ರತಿರೋಧಕವನ್ನು ಸರಿಪಡಿಸುವುದು ಮತ್ತು ಹೆಚ್ಚು ಸೂಕ್ಷ್ಮ ಮತ್ತು ಪ್ರತಿಕ್ರಿಯಾತ್ಮಕ ವಾಗಿಸುವುದು. ಹೀಗಾಗಿ ಇದನ್ನು ಮಧುಮೇಹಿಗಳು ಬಳಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ತೂಕ ಇಳಿಸಲು ಸಹಕಾರಿ

ಮೆಂತ್ಯೆ ಕಾಳಿನ ನೀರನ್ನು ನಿತ್ಯವೂ ಕುಡಿದರೆ ಅದರಿಂದ ತೂಕ ಇಳಿಸಲು ತುಂಬಾ ನೆರವಾಗುವುದು. ಇದು ಚಯಾಪಚಯಕ್ಕೆ ವೇಗ ನೀಡುವುದು. ಇದು ದೇಹದಲ್ಲಿ ಉಷ್ಣತೆ ಹೆಚ್ಚು ಮಾಡುವುದು ಮತ್ತು ತೂಕ ಇಳಿಸಲು ಮತ್ತು ನಿರ್ವಹಿಸಲು ಸಹಕರಿಸುವುದು. ತೂಕ ಇಳಿಸಲು ಬಯಸಿದ್ದರೆ ಆಗ ನೀವು ಮೆಂತ್ಯೆ ಕಾಳನ್ನು ಬಳಸಿ.

ಉತ್ತಮ ಜೀರ್ಣಕ್ರಿಯೆ

ಮೆಂತ್ಯೆ ಕಾಳು ಆಮ್ಲ ವಿರೋಧಿಯಾಗಿದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಅದರಿಂದ ಜೀರ್ಣಕ್ರಿಯೆ ವ್ಯವಸ್ಥೆಗೆ ಬಲ ಬರುವುದು ಮತ್ತು ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆ ಉಬ್ಬರದ ಸಮಸ್ಯೆಯು ಕಡಿಮೆ ಆಗುವುದು. ಇದನ್ನು ಶೀತ ತಿಂಗಳುಗಳಲ್ಲಿ ತಿಂದರೆ ಒಳ್ಳೆಯದು ಎಂದು ಆಯುರ್ವೇದ ಮತ್ತು ಯೋಗ ತಜ್ಞ ಯೋಗಾಚಾರ್ಯ ಅನೂಪ್ ಅವರು ಸಲಹೆ ನೀಡುತ್ತಾರೆ.

ಇತರ ಲಾಭಗಳು

ಮೆಂತ್ಯೆ ಕಾಳಿನ ನೀರು ದೇಹದಲ್ಲಿ ದ್ರವಾಂಶ ನಿಲ್ಲುವುದು ಮತ್ತು ಹೊಟ್ಟೆ ಉಬ್ಬರ ತಡೆಯುವುದು. ಇದರಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಇದೆ ಮತ್ತು ನಿಯಮಿತವಾಗಿ ಇದರ ಸೇವನೆ ಮಾಡಿದರೆ ಅದರಿಂದ ದೇಹವು ಆರಾಮವಾಗಿರಲು ನೆರವಾಗುವುದು.

ಗಮನಿಸಬೇಕಾದ ಅಂಶಗಳು

ಒಂದು ಕಪ್ ನೀರಿಗೆ ಒಂದು ಚಮಚ ಮೆಂತ್ಯೆ ಕಾಳು ಹಾಕಿ ಅದರ ನೀರು ಕುಡಿದರೆ ತುಂಬಾ ಒಳ್ಳೆಯದು. ಕರುಳಿನ ಅಲ್ಸರ್ ಇರುವವರು ಇದನ್ನು ಸೇವಿಸಬಾರದು. ಅತಿಯಾಗಿ ಸೇವನೆ ಮಾಡಿದರೆ ಅದರಿಂದ ಚರ್ಮವು ಒಣಗುವ ಸಮಸ್ಯೆಯು ಕಾಡುವುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *