ಹೃದ್ರೋಗಿಗೆ ಹಂದಿ ಹೃದಯ ಜೋಡಿಸಿದ ವೈದ್ಯರು – 40 ದಿನಗಳ ನಂತರ ಆ ವ್ಯಕ್ತಿ ಏನಾದ ಗೊತ್ತಾ?

ಹೃದ್ರೋಗಿಗೆ ಹಂದಿ ಹೃದಯ ಜೋಡಿಸಿದ ವೈದ್ಯರು – 40 ದಿನಗಳ ನಂತರ ಆ ವ್ಯಕ್ತಿ ಏನಾದ ಗೊತ್ತಾ?

ನ್ಯೂಸ್ ಆ್ಯರೋ : ಮನುಷ್ಯನಿಗೆ ಹಂದಿ ಹೃದಯ ಜೋಡಿಸಿ ಆ ವ್ಯಕ್ತಿ 40 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ಕಳೆದ ಸೆಪ್ಟೆಂಬರ್​ನಲ್ಲಿ ಅಮೆರಿಕದ ಮೇರಿಲ್ಯಾಂಡ್ ವಿವಿ ತಜ್ಞರು ವೈದ್ಯ ಲೋಕದಲ್ಲಿ ಹೊಸ ಸಾಹಸ ಮಾಡಿದ್ದರು. ಸಾವಿನಂಚಿನಲ್ಲಿದ್ದ 58 ವರ್ಷದ ವ್ಯಕ್ತಿಯನ್ನು ಉಳಿಸಿಕೊಳ್ಳಲು ಅಂತಿಮ ಪ್ರಯತ್ನವಾಗಿ ಹಂದಿಯ ಹೃದಯವನ್ನು ಅವರಿಗೆ ಅಳವಡಿಸಿದ್ದರು. ಶಸ್ತ್ರಚಿಕಿತ್ಸೆ ಏನೋ ಯಶಸ್ವಿಯಾಗಿತ್ತು, ಆದರೆ ಶಸ್ತ್ರಚಿಕಿತ್ಸೆ ಬಳಿಕ ಮನುಷ್ಯನ ದೇಹ ಹಾಗೂ ಹೃದಯವನ್ನು ಹೊಂದಿಕೊಳ್ಳದೆ ಸಾವನ್ನಪ್ಪಿದ್ದರು.

ಲಾರೆನ್ಸ್ ಫೌಸೆಟ್ ವ್ಯಕ್ತಿಯು ಹಂದಿ ಹೃದಯದ ಕಸಿ ಪಡೆದ ವಿಶ್ವದ ಎರಡನೇ ರೋಗಿಯಾಗಿದ್ದಾರೆ. ಇದು ವೈದ್ಯಕೀಯ ಸಂಶೋಧನೆಯ ಬೆಳವಣಿಗೆಯ ಕ್ಷೇತ್ರದಲ್ಲಿ ಮೈಲಿಗಲ್ಲು ಎಂದೇ ಹೇಳಲಾಗಿತ್ತು. 1,00,000 ಕ್ಕೂ ಹೆಚ್ಚು ಅಮೆರಿಕನ್ನರು ಪ್ರಸ್ತುತ ಅಂಗಾಂಗ ಕಸಿಗಾಗಿ ಕಾಯುವವರ ಪಟ್ಟಿಯಲ್ಲಿದ್ದಾರೆ.

ಕಳೆದ ವರ್ಷ ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ರೋಗಿಯು, ಹಲವು ಕಾರಣಗಳಿಂದ ಹೃದಯ ಕಸಿಯಾದ 2 ತಿಂಗಳಿಗೆ ಮೃತಪಟ್ಟಿದ್ದರು.

ಆರೋಗ್ಯ ಕಾರಣಗಳು ಮತ್ತು ಹೃದಯದ ವೈಫಲ್ಯದಿಂದಾಗಿ ಸಾಂಪ್ರದಾಯಿಕ ವಿಧಾನದಲ್ಲಿ ಹೃದಯ ಕಸಿ ವಿಫಲವಾದ ಕಾರಣ ಹಂದಿಯ ಹೃದಯವನ್ನು ಅಳವಡಿಸಲಾಗಿತ್ತು ಎಂದು ತಜ್ಞರ ತಂಡ ತಿಳಿಸಿದೆ.

ಯಶಸ್ವಿ ಮಾನವನಿಗೆ ಹಂದಿ ಮೂತ್ರಪಿಂಡ ಕಸಿ:

ಅಮೆರಿಕದಲ್ಲಿ ಕೆಲವು ತಿಂಗಳುಗಳ ಹಿಂದೆ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಗೆ ಅನುವಂಶಿಕವಾಗಿ ಮಾರ್ಪಡಿಸಿರುವ ಹಂದಿ ಮೂತ್ರಪಿಂಡವನ್ನು ಯಶಸ್ವಿಯಾಗಿ ಕಸಿ ಮಾಡುವ ಪ್ರಯೋಗವನ್ನು ನ್ಯೂಯಾರ್ಕ್​ ವಿಶ್ವವಿದ್ಯಾಲಯ ಮಾಡಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *