Mangalore : ಎರಡು ಲಕ್ಷಕ್ಕೂ ಅಧಿಕ ಬೆಲೆಯ 750ಕೆಜಿ ಗೋಮಾಂಸ ಸಾಗಾಟ -ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ ಬಜ್ಪೆ ಪೋಲಿಸರು

ನ್ಯೂಸ್ ಆ್ಯರೋ : ಎರಡು ಲಕ್ಷಕ್ಕೂ ಅಧಿಕ ಮೌಲ್ಯದ 750kg ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನದ ಸಹಿತ ಬಜ್ಪೆ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡುಬಿದ್ರೆಯ ಹಂಡೇಲು ನಿವಾಸಿಗಳಾದ ಮೊಹಮ್ಮದ್ ಆರೀಫ್ (24) ತಂದೆ: H ಬಾವ ಮತ್ತು ಮೊಹಮ್ಮದ್ ಸುಲ್ತಾನ್ (19) ತಂದೆ:- ಅಬೂಬಕ್ಕರ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ :
ದಿನಾಂಕ 28-07-2024 ರಂದು ದೊರೆತ ಖಚಿತ ಮಾಹಿತಿಯಂತೆ ಬಜಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರೇವಣಸಿದ್ದಪ್ಪರವರು ಸಿಬ್ಬಂದಿಗಳೊಂದಿಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ KA 04 MS 6341 ನೇ ನಂಬ್ರದ ವಾಹನದಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಒಟ್ಟು 750 KG ತೂಕದ ದನದ ಮಾಂಸವನ್ನು ತುಂಬಿಸಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ವಿಚಾರಣೆ ಸಮಯ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಜೊತೆ ಸೇರಿ ಕಾರ್ಕಳ, ಹೆಬ್ರಿ ಕಡೆಗಳಿಂದ ದನಗಳನ್ನು ತಂದು ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಮುಂಡೇಲು ಎಂಬಲ್ಲಿ ಪರವಾಣಿಗೆ ಇಲ್ಲದೆ ಅಕ್ರಮವಾಗಿ ಕಡಿದು ಮಾಂಸ ಮಾಡಿರುವುದು ಬೆಳಕಿಗೆ ಬಂದಿದೆ.
ಆರೋಪಿ ಮೊಹಮ್ಮದ್ ಆರೀಫ್ ನ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಬನಕಲ್ ಮತ್ತು ಬಜಪೆ ಪೊಲೀಸ್ ಠಾಣೆಯಲ್ಲಿ ದನ ಕಳವು ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿರುತ್ತದೆ. ಪ್ರಮುಖ ಆರೋಪಿತರ ಪತ್ತೆಗೆ ಬಾಕಿಯಿದ್ದು ಇವರ ಪತ್ತೆಯ ಬಗ್ಗೆ ವಿಶೇಷ ತಂಡ ರಚನೆ ಮಾಡಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಗಳೂರು ಉತ್ತರ ಉಪ ವಿಭಾಗದ ACP ಶ್ರೀ ಮನೋಜ್ ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೀಪ್ ಜಿ.ಎಸ್ ರವರ ನೇತೃತ್ವದಲ್ಲಿ ಪಿ.ಎಸ್.ಐ ರೇವಣಸಿದ್ದಪ್ಪ, ಪಿ.ಎಸ್.ಐ ಕುಮಾರೇಶನ್, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರಾದ ರಶೀದ ಶೇಖ್, ಸುಜನ್, ದೇವಪ್ಪ ಹೊಸಮನಿ, ದುರ್ಗಾಪ್ರಸಾದ, ಜಗದೀಶ್, ಬಸವರಾಜ್ ಪಾಟೀಲ್, ಪ್ರೇಮ್ ಕುಮಾರ್, ಭಿಮಪ್ಪ, ಭರಮಾ ಬಡಿಗೇರ್, ಪ್ರಕಾಶ್, ಚಂದ್ರಕಾಂತ್, ಚಿದಾನಂದ, ವಿರುಪಾಕ್ಷ ಮತ್ತು ಇತರ ಸಿಬ್ಬಂದಿಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.
Leave a Comment