ವಿಜ್ಞಾನದ ಮೂಲ ವೇದಗಳಾಗಿದ್ದರೂ ವಿದೇಶಿಯರಿಗೆ ಕ್ರೆಡಿಟ್ – ಮನಬಿಚ್ಚಿ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್

ವಿಜ್ಞಾನದ ಮೂಲ ವೇದಗಳಾಗಿದ್ದರೂ ವಿದೇಶಿಯರಿಗೆ ಕ್ರೆಡಿಟ್ – ಮನಬಿಚ್ಚಿ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್

ನ್ಯೂಸ್ ಆ್ಯರೋ‌ : ವಿಜ್ಞಾನದ ಹಲವು ತತ್ವಗಳು ಹಾಗೂ ವಿಷಯಗಳ ಮೂಲ ವೇದಗಳಾಗಿದ್ದರೂ ಅವುಗಳನ್ನು ಪಾಶ್ಚಿಮಾತ್ಯ ಅನ್ವೇಷಣೆಗಳೆಂದು ಬಿಂಬಿಸಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮಹರ್ಷಿ ಪಣಿಸಿ ಸಂಸ್ಕøತ ಮತ್ತು ವೇದ ವಿವಿಯ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಲ್ಜಿಬ್ರಾ, ಸ್ಕ್ವೇರ್ ರೂಟ್ಸ್, ಆರ್ಕಿಟೆಕ್ಚರ್, ಮೆಟಲರ್ಜಿ, ವಾಯು ಯಾನದ ವಿವರಗಳು ವೇದಗಳಲ್ಲಿ ಉಲ್ಲೇಖವಾಗಿವೆ. ಆದರೆ ಇವೆಲ್ಲ ಯುರೋಪ್ ಮತ್ತು ಅರಬ್ ದೇಶಗಳ ಮೂಲಕ ಸಾಗಿ ಪಾಶ್ಚಿಮಾತ್ಯ ವಿಜ್ಞಾನಿಗಳ ಸಂಶೋಧನೆ ಎಂದು ಕರೆಯಲ್ಪಟ್ಟಿತು ಎಂದು ಹೇಳಿದ್ದಾರೆ.

ಆ ಕಾಲದಲ್ಲಿ ಸೂಕ್ತ ಲಿಪಿಯಿಲ್ಲದ ಸಂಸ್ಕೃತವನ್ನು ಬಳಸಿದ್ದೇ ಇದಕ್ಕೆ ಕಾರಣ. ಬಳಿಕ ಜನರು ಸಂಸ್ಕೃತಕ್ಕಾಗಿ ದೇವನಾಗರಿ ಲಿಪಿ ಬಳಸಲು ಆರಂಭಿಸಿದರು ಎಂದು ವಿವರಿಸಿದ್ದಾರೆ.

ಖಗೋಳ ವಿಜ್ಞಾನ, ವೈದ್ಯಕೀಯ ವಿಜ್ಞಾನ, ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಏರೋನಾಟಿಕಲ್ ಕ್ಷೇತ್ರದಲ್ಲಿನ ಆವಿಷ್ಕಾರಗಳನ್ನು ಸಂಸ್ಕೃತದಲ್ಲಿ ಬರೆಯಲಾಗಿದೆ. ಆದರೆ ಅವುಗಳ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯಲಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ಸೋಮನಾಥ್ ಖಗೋಳ ವಿಜ್ಞಾನದ ಕೃತಿಯಾದ ಸೂರ್ಯ ಸಿದ್ಧಾಂತದ ಉದಾಹರಣೆ ನೀಡಿದರು.

Related post

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…
ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…

Leave a Reply

Your email address will not be published. Required fields are marked *