ಚಂದ್ರನ ಮೇಲ್ಮೈ ಮೇಲೆ ಓಡಾಡುತ್ತಿರುವ ಪ್ರಜ್ಞಾನ್ ರೋವರ್ – ಹೊಸ ವಿಡಿಯೋ ಹಂಚಿಕೊಂಡ ಇಸ್ರೋ : ಚಂದ್ರನ ವಿಡಿಯೋ ಇಲ್ಲಿದೆ ನೋಡಿ…

ಚಂದ್ರನ ಮೇಲ್ಮೈ ಮೇಲೆ ಓಡಾಡುತ್ತಿರುವ ಪ್ರಜ್ಞಾನ್ ರೋವರ್ – ಹೊಸ ವಿಡಿಯೋ ಹಂಚಿಕೊಂಡ ಇಸ್ರೋ : ಚಂದ್ರನ ವಿಡಿಯೋ ಇಲ್ಲಿದೆ ನೋಡಿ…

ನ್ಯೂಸ್ ಆ್ಯರೋ‌ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ 3 ಯೋಜನೆ ಕುರಿತು ಹೊಸ ಮಾಹಿತಿಯೊಂದನ್ನ ನೀಡಿದ್ದು ಪ್ರಗ್ಯಾನ್ ರೋವರ್ ಚಟುವಟಿಕೆ ಬಗ್ಗೆ ಹೊಸ ವಿಡಿಯೋವನ್ನು ಶೇರ್ ಮಾಡಿದೆ.

ಪ್ರಗ್ಯಾನ್ ರೋವರ್ ಈಗಾಗಲೇ ಚಂದ್ರನ ಮೇಲೆ 8 ಮೀಟರ್‌ನಷ್ಟು ಚಲಿಸಿದ್ದು, ಚಂದ್ರನ ಮೇಲಿನ ಅಧ್ಯಯನವನ್ನು ಆರಂಭಿಸಿದೆ. “ಚಂದ್ರನ ದಕ್ಷಿಣ ಧ್ರುವದ ರಹಸ್ಯಗಳನ್ನು ಅಧ್ಯಯನ ಮಾಡುವ ನಿಮಿತ್ತ ರೋವರ್ ಸಂಚರಿಸುತ್ತಿದ್ದು, ‘ಶಿವಶಕ್ತಿ ಪಾಯಿಂಟ್’ ಸುತ್ತಲೂ ತಿರುಗುತ್ತಿದೆ ಎಂದು ಇಸ್ರೋ ಹೇಳಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಪ್ರಗ್ಯಾನ್ ರೋವರ್ ಚಲನಾ ಶಿಲ್ಪಾ ಕುರಿತು ಅಪ್ಡೇಟ್ಸ್ ಕೊಟ್ಟಿದ್ದು, ಈ ಶಿವಶಕ್ತಿ ಪಾಯಿಂಟ್ ಬಳಿ ರೋವರ್ ಪ್ರಜ್ಞಾನ್ ಓಡಾಟ ನಡೆಸಿ ದಕ್ಷಿಣ ಧ್ರುವದಲ್ಲಿ ಚಂದ್ರನ ಹಲವು ಕೌತುಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿಸಿದೆ.

“ದಕ್ಷಿಣ ಧ್ರುವದಲ್ಲಿ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಶಿವಶಕ್ತಿ ಪಾಯಿಂಟ್‌ನ ಸುತ್ತಲೂ ಪ್ರಜ್ಞಾನ್ ರೋವರ್ ತಿರುಗುತ್ತಿದೆ’ ಎಂದು ಇಸ್ರೋ ಟ್ವಿಟರ್ ನಲ್ಲಿ ಬರೆದು ವಿಡಿಯೋವನ್ನು ಹಂಚಿಕೊಂಡಿದ್ದು ,40 ಸೆಕೆಂಡ್‌ಗಳ ವಿಡಿಯೋದಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಚಲಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಅದು ಚಲಿಸಿದ ಜಾಗದಲ್ಲಿ ಅದರ ಹೆಜ್ಜೆ ಗುರುತುಗಳೂ ಮೂಡಿವೆ.

ಇನ್ನು ಇಂದು ಇಸ್ರೋಗೆ ಭೇಟಿ ನೀಡಿದ ಪ್ರಧಾನಿ ಮೋದಿ ಲ್ಯಾಂಡರ್ ಆದ ಸ್ಥಳವನ್ನು ‘ಶಿವ ಶಕ್ತಿ ಪಾಯಿಂಟ್’ ಎಂದು ನಾಮಕರಣ ಮಾಡಿದ್ದು, ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದೂ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *