ಕೊರೊನಾಗಿಂತಲೂ ಡೇಂಜರಸ್ ವೈರಸ್ ಈ “ಡಿಸೀಸ್ ಎಕ್ಸ್” – ಐದು ಕೋಟಿ ಜನರ ಸಾವಿನ ಸೂಚನೆ ನೀಡಿದ WHO

ಕೊರೊನಾಗಿಂತಲೂ ಡೇಂಜರಸ್ ವೈರಸ್ ಈ “ಡಿಸೀಸ್ ಎಕ್ಸ್” – ಐದು ಕೋಟಿ ಜನರ ಸಾವಿನ ಸೂಚನೆ ನೀಡಿದ WHO

ನ್ಯೂಸ್ ಆ್ಯರೋ : ಪ್ರಪಂಚದಾದ್ಯಂತ ವಿನಾಶವನ್ನೇ ಉಂಟು ಮಾಡಿದ್ದ ಕೊರೊನಾದ ಭಯ ಇನ್ನೂ ಜನರಲ್ಲಿ ಮನೆ ಮಾಡಿದೆ. ಈಗಲೂ ಅನೇಕ ದೇಶಗಳಲ್ಲಿ ಈ ಸಾಂಕ್ರಾಮಿಕ ರೋಗಕ್ಕೆ ಅನೇಕ ಜನರು ಬಲಿಯಾಗುತ್ತಿದ್ದಾರೆ. ಆದರೆ ಇನ್ನು ಮುಂದೆ ಬರುವ ಸಾಂಕ್ರಾಮಿಕ ಮಹಾ ವಿನಾಶವನ್ನೇ ಉಂಟು ಮಾಡಬಹುದು ಎಂದು ವಿಶ್ವ ಅರೋಗ್ಯ ಸಂಸ್ಥೆ ಎಚ್ಚರಿಸಿದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ವಿಶ್ವದಾದ್ಯಂತ ಸುಮಾರು ಏಳು ಕೋಟಿ ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ವೈರಸ್ ಕಾಣಿಸಿಕೊಂಡಿದ್ದು, ಇದು ಕೋವಿಡ್- 19 ಗಿಂತ ಏಳು ಪಟ್ಟು ಹೆಚ್ಚು ಅಪಾಯಕಾರಿ. ಇದನ್ನು ಡಿಸೀಸ್ ಎಕ್ಸ್ ಎಂದು ಹೆಸರಿಸಲಾಗಿದ್ದು, ಇದರಿಂದ ಕನಿಷ್ಠ 5 ಕೋಟಿ ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಡಿಸೀಸ್ ಎಕ್ಸ್ ಸಾಂಕ್ರಾಮಿಕ ರೂಪವನ್ನು ಪಡೆದರೆ ಕನಿಷ್ಠ 5 ಕೋಟಿ ಜನರು ಸಾಯಬಹುದು. ಇದನ್ನು ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಇದು ಕೋವಿಡ್ -19 ಗಿಂತ ಹೆಚ್ಚು ಮಾರಕವಾಗಿದೆ ಎಂದು ಬ್ರಿಟನ್‌ನ ಲಸಿಕೆ ಕಾರ್ಯಪಡೆಯ ಮುಖ್ಯಸ್ಥ ಡೇಮ್ ಕೇಟ್ ಬಿಂಗ್‌ಹ್ಯಾಮ್ ಹೇಳಿದ್ದಾರೆ.

1918-19ರಲ್ಲಿ ಸಾಂಕ್ರಾಮಿಕ ರೋಗವಿತ್ತು. ಆ ವೇಳೆಯಲ್ಲಿ ವಿಶ್ವದಾದ್ಯಂತ 5 ಕೋಟಿಗೂ ಹೆಚ್ಚು ಜನರು ಸಾವನ್ನಪ್ಪಿದ್ದರು. ವಿಜ್ಞಾನಿಗಳು ಈಗ ಕಾಣಿಸಿಕೊಂಡಿರುವ ವೈರಸ್ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಕೇಟ್ ಬಿಂಗ್‌ಹ್ಯಾಮ್ ತಿಳಿಸಿದ್ದಾರೆ.

ಹೆಚ್ಚಿನ ವೈರಸ್ ಗಳು ಭೂಮಿಯಲ್ಲಿ ಪುನರಾವರ್ತನೆ ಮತ್ತು ರೂಪಾಂತರವಾಗುತ್ತಿದ್ದು, ಅವೆಲ್ಲವೂ ಅಪಾಯ ಉಂಟು ಮಾಡುವುದಿಲ್ಲ. ಪ್ರಸ್ತುತ ವಿಜ್ಞಾನಿಗಳು 25 ವೈರಸ್ ಕುಟುಂಬಗಳನ್ನು ಅಧ್ಯಯನ ಮಾಡುತ್ತಿದ್ದಾರೆ. ಅವುಗಳಲ್ಲಿ ಯಾವುದಾದರೂ ತೀವ್ರ ಸಾಂಕ್ರಾಮಿಕ ರೋಗವಾಗಿ ರೂಪಾಂತರವಾಗಬಹುದು ಎಂದು ಅವರು ತಿಳಿಸಿದ್ದಾರೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *