ಮದುವೆಯ ಶುಭವೇಳೆಯಲ್ಲೇ ಅಗ್ನಿಯ ರೌದ್ರನರ್ತನ – ನೋಡನೋಡುತ್ತಲೇ ಸಜಿವ ದಹನವಾದ್ರೂ ನೂರಕ್ಕೂ ಅಧಿಕ ಮಂದಿ : ವಿಡಿಯೋ ವೈರಲ್..!!

ಮದುವೆಯ ಶುಭವೇಳೆಯಲ್ಲೇ ಅಗ್ನಿಯ ರೌದ್ರನರ್ತನ – ನೋಡನೋಡುತ್ತಲೇ ಸಜಿವ ದಹನವಾದ್ರೂ ನೂರಕ್ಕೂ ಅಧಿಕ ಮಂದಿ : ವಿಡಿಯೋ ವೈರಲ್..!!

ನ್ಯೂಸ್‌ ಆ್ಯರೋ : ಮದುವೆ ಮಂಟಪದಲ್ಲಿ ಬೆಂಕಿ ಅವಘಡ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, 150ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಕೆಲದಿನಗಳ ಹಿಂದೆ ನಡೆದಿದ್ದು, ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಶ್ವವೇ ಬೆಚ್ಚಿ ಬಿದ್ದಿದೆ.

ವಿಡಿಯೋದಲ್ಲಿ ವಧು-ವರ ಒಟ್ಟಿಗೆ ನೃತ್ಯ ಮಾಡುತ್ತಿರುವಾಗ ಮೇಲ್ಛಾವಣಿಯಿಂದ ಬೆಂಕಿಯ ಕಿಡಿ ಬೀಳಲು ಶುರುವಾಗುದೆ. ಇದನ್ನು ನೋಡಿದ ಜನರು ಭಯದಿಂದ ಪ್ರಾಣ ಉಳಿಸಿಕೊಳ್ಳಲು ಹೊರಕ್ಕೆ ಓಡಲು ಶುರು ಮಾಡಿದ್ದಾರೆ. ನೋಡ ನೋಡುತ್ತಿದ್ದ ಹಾಗೇ ಬೆಂಕಿ ಇಡೀ ಹಾಲ್‌ ಅನ್ನು ಆವರಿಸಿಕೊಂಡು, 100ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಈ ಎಲ್ಲ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

ಈ ದಾರುಣ ಘಟನೆ ಇರಾಕ್‌ನ ಕರಾಕೋಶ್ ಗ್ರಾಮದ ಸಮೀಪವಿರುವ ಮದುವೆ ಮಂಟಪದಲ್ಲಿ ನಡೆದಿದೆ. ಕ್ರಿಶ್ಚಿಯನ್ ಸಮುದಾಯದ ಮದುವೆ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮದುವೆ ಮಂಟಪದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದು ಕ್ಷಣಾರ್ಧದಲ್ಲೆ ಇಡೀ ಹಾಲ್‌ ಅನ್ನು ಆವರಿಸಿಕೊಂಡಿದೆ.

ರಕ್ಷಣಾ ಅಧಿಕಾರಿಗಳು ಕಾರ್ಯಚರಣೆ ನಡೆಸಿದ್ದಾರೆ. ನಂತರ ಪ್ರತಿಕ್ರಿಯಿಸಿದ ಅವರು ಮದುವೆ ಹಾಲ್‌ ಅನ್ನು ಕಡಿಮೆ ವೆಚ್ಚದ ಸಾಮಾಗ್ರಿಗಳಿಂದ ನಿರ್ಮಾಣ ಮಾಡಲಾಗಿದೆ. ಅದಲ್ಲದೆ ಅಲಂಕಾರಕ್ಕೆ ಬಳಸಿದ ವಸ್ತುಗಳು ಹೆಚ್ಚು ಸುಡುವ ವಸ್ತುಗಳಾಗಿದ್ದು ಇದು ದೇಶದಲ್ಲಿ ಕಾನೂನು ಬಾಹಿರವಾಗಿದೆ. ಇದರಿಂದ ಇಷ್ಟು ದೊಡ್ಡ ಮಟ್ಟದ ಅವಘಡ ಸಂಭವಿಸಿದೆ ಎಂದು ಅವರು ವಿವರಿಸಿದರು.

ಈ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು, ಅನೇಕ ಮಂದಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.

Related post

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…

Leave a Reply

Your email address will not be published. Required fields are marked *