ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪಾಕಿಸ್ತಾನ – ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪಾಕಿಸ್ತಾನ – ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ

ನ್ಯೂಸ್ ಆ್ಯರೋ : ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಪಾಕಿಸ್ತಾನದ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಹಂತದಲ್ಲಿದೆ.

ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಾಗಿ 13 ಗುತ್ತಿಗೆ ವಿಮಾನಗಳಲ್ಲಿ 5 ವಿಮಾನಗಳನ್ನು ರದ್ದುಗೊಳಿಸಿದ್ದು ಇನ್ನೂ 4 ವಿಮಾನಗಳು ರದ್ದಾಗುವ ಸಾಧ್ಯತೆ ಇದೆ.

ಪಾಕಿಸ್ತಾನಕ್ಕೆ ತಕ್ಷಣ ಸುಮಾರು 636 ಕೋಟಿ ರೂಪಾಯಿಗಳ ಅಗತ್ಯವಿದೆ. ಇಂಧನದ ಹಣ ಪಾವತಿಸದ ಕಾರಣ ಅನೇಕ ಗಲ್ಫ್ ರಾಷ್ಟ್ರಗಳು ಪಾಕಿಸ್ತಾನಕ್ಕೆ ವಿಮಾನ ಹಾರಾಟವನ್ನು ನಿಲ್ಲಿಸಿದೆ. ಒಟ್ಟು ಆಸ್ತಿಗಿಂತ 5 ಪಟ್ಟು ಹೆಚ್ಚು ಅಂದರೆ ಸುಮಾರು 20 ಸಾವಿರ ಕೋಟಿ ರೂ. ಗಿಂತ ಹೆಚ್ಚಿನ ಸಾಲವನ್ನು ಅದು ಹೊಂದಿದೆ ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ ವರದಿ ಮಾಡಿದೆ.

ತುರ್ತಾಗಿ ಹಣ ಪಾವತಿ ಮಾಡದೇ ಇದ್ದರೆ ವಿಮಾನಯಾನ ಸಂಸ್ಥೆಯ ಎಲ್ಲ ವಿಮಾನಗಳ ಸೇವೆ ಹಾಗು ಪಿಐಎ ಬೋಯಿಂಗ್ ಮತ್ತು ಏರ್‌ಬಸ್ ವಿಮಾನದ ಬಿಡಿ ಭಾಗಗಳ ಪೂರೈಕೆ ಸೆಪ್ಟೆಂಬರ್ ಮಧ್ಯದ ವೇಳೆಗೆ ನಿಲ್ಲಬಹುದು. ಆದರೆ ಪಿಐಎ ಹಣ ಪಾವತಿ ಬಗ್ಗೆ ಲಿಖಿತ ಭರವಸೆ ನೀಡಿದ್ದರಿಂದ ಸದ್ಯ ವಿಮಾನಯಾನ ಸೇವೆಗಳನ್ನು ಮುಂದುವರಿಸಲಾಗಿದೆ ಎಂದು ಪಿಐಎ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಇಸ್ಲಾಮಾಬಾದ್ ವಿಮಾನ ನಿಲ್ದಾಣವನ್ನು ಗುತ್ತಿಗೆ ಆಧಾರದ ಮೇಲೆ ನೀಡಲು ನಿರ್ಧರಿಸಿದೆ ಎಂದು ಪಾಕಿಸ್ತಾನದ ವಿಮಾನಯಾನ ಸಚಿವ ಖವಾಜಾ ಸಾದ್ ರಫೀಕ್ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸುಧಾರಿಸಲು, ಅದನ್ನು 15 ವರ್ಷಗಳವರೆಗೆ ಖಾಸಗಿ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗುವುದು. ಇದರರ್ಥ ಸರ್ಕಾರ ವಿಮಾನ ನಿಲ್ದಾಣವನ್ನು ಮಾರಾಟ ಮಾಡುತ್ತಿದೆ ಎಂದಲ್ಲ, ಉತ್ತಮ ನಿರ್ವಾಹಕರನ್ನು ವಿಮಾನ ನಿಲ್ದಾಣದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಈ ರೀತಿ ಮಾಡಲಾಗುತ್ತಿದೆ ಎಂದು ಸಾದ್ ರಫೀಕ್ ಸ್ಪಷ್ಟಪಡಿಸಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *