Video : ಕಂಡಕಂಡವರಿಗೆ ಗುಂಡು, ಮನೆ ಮನೆಗೆ ನುಗ್ಗಿ ಹುಡುಕಿ ದಾರುಣ ಕೊಲೆ – ಹಮಾಸ್ ಉಗ್ರರ ಅಟ್ಟಹಾಸದ ವಿಡಿಯೋ ಹರಿಬಿಟ್ಟ ಇಸ್ರೇಲ್ ಸೇನೆ

Video : ಕಂಡಕಂಡವರಿಗೆ ಗುಂಡು, ಮನೆ ಮನೆಗೆ ನುಗ್ಗಿ ಹುಡುಕಿ ದಾರುಣ ಕೊಲೆ – ಹಮಾಸ್ ಉಗ್ರರ ಅಟ್ಟಹಾಸದ ವಿಡಿಯೋ ಹರಿಬಿಟ್ಟ ಇಸ್ರೇಲ್ ಸೇನೆ

ನ್ಯೂಸ್ ಆ್ಯರೋ : ಇಸ್ರೇಲ್ ಹಾಗೂ ಉಗ್ರರ ನಡುವಿನ ಭೀಕರ ಯುದ್ಧದಲ್ಲಿ ಪ್ಯಾಲೆಸ್ತೇನಿಯನ್‌ನ 2,650 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಇದರಲ್ಲಿ 6 ಮಂದಿ ಹಮಾಸ್ ಮುಖಂಡರು ಹತರಾಗಿದ್ದಾರೆ. 9,600 ಮಂದಿ ಗಾಯಗೊಂಡಿದ್ದಾರೆ.

ದಾಳಿಯ ವೇಳೆ ಉಗ್ರರೇ ಮಾಡಿದ ವಿಡಿಯೋಗಳನ್ನು ಇಸ್ರೇಲ್ ಪಡೆ ತನ್ನ ಅಧಿಕೃತ ಎಕ್ಸ್ ವೇದಿಕೆಯಲ್ಲಿ ಹಂಚಿಕೊಂಡಿದೆ. ಅದರಲ್ಲಿ ಬಂದೂಕುಧಾರಿ ಉಗ್ರರು ಇಸ್ರೇಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ಮಾಡುತ್ತಿರುವುದನ್ನು ಕಾಣಬಹುದು.

ಮನೆಗಳಿಗೆ ನುಗ್ಗುವುದು, ಎದುರು ಸಿಕ್ಕ ಜನರ ಮೇಲೆಲ್ಲ ಗುಂಡು ಹಾರಿಸುತ್ತಿರುವುದು ಅದರಲ್ಲಿದೆ. ಮನೆಯೊಂದರ ಮೇಲೆ ರಾಕೆಟ್ ದಾಳಿಯಾಗಿ ಇಡೀ ಮನೆ ಧ್ವಂಸವಾಗಿದ್ದು, ಈ ಮನೆ ಪ್ರೀತಿಯಿಂದ ತುಂಬಿತ್ತು. ಹಮಾಸ್ ದಾಳಿಗೆ ಹಾಳು ಕೊಂಪೆಯಾಗಿದೆ ಎಂದು ಬರೆದುಕೊಂಡಿದೆ.

ಇನ್ನೂ ಇಸ್ರೇಲ್‌ನ ಪ್ರತಿ ದಾಳಿಗೆ ಗಾಜಾ ಧ್ವಂಸವಾಗಿದೆ. ದಕ್ಷಿಣ ಗಾಜಾದ ಕಡೆಗೆ ಜನರು ಸ್ಥಳಾಂತರವಾಗಿದ್ದರಿಂದ ಇಲ್ಲೂ ಆಹಾರ, ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ವಿಶ್ವಸಂಸ್ಥೆಯ ಪ್ಯಾಲೆಸ್ಟೈನ್ ನಿರಾಶ್ರಿತರ ಸಂಸ್ಥೆ ಹೇಳಿದೆ. ಇಲ್ಲಿನ ಶಾಲೆಗಳು ಮತ್ತು ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿರುವ ಜನರ ಸಂಖ್ಯೆಯು ಅಗಾಧವಾಗಿದೆ.

ಅವರಿಗೆ ಸೂಕ್ತ ಸೌಕರ್ಯ ಮತ್ತು ಆಹಾರದ ವ್ಯವಸ್ಥೆ ಇಲ್ಲವಾಗಿದೆ ಎಂದಿದೆ. 10ಲಕ್ಷ ಮಂದಿ ಜನರು ದಕ್ಷಿಣ ಗಾಜಾಗೆ ಸ್ಥಳಾಂತರವಾಗಿದ್ದರಿಂದ ಇಲ್ಲಿನ ಮೂಲ ಸೌಕರ್ಯಗಳು ಖಾಲಿಯಾಗುತ್ತ ಬಂದಿದೆ.ಈ ಭಾಗದಲ್ಲಿ ಸದ್ಯ ಲಭ್ಯವಿರುವ ಆಹಾರ ಅಥವಾ ಔಷಧವೂ ಕೆಲವೇ ದಿನಗಳಲ್ಲಿ ಖಾಲಿಯಾಗಲಿದೆ.

ಹಮಾಸ್ ವಶದಲ್ಲಿರುವ ಇಸ್ರೇಲ್ ನಾಗರೀಕರನ್ನು ಬಿಡುಗಡೆ ಮಾಡಿ: ವಿಶ್ವಸಂಸ್ಥೆ ಮನವಿ

ವಿಶ್ವಸಂಸ್ಥೆಯ ಜನರಲ್ ಸೆಕ್ರೆಟರಿ ಆಂಟೋನಿಯೊ ಗುಟೆರೆಸ್ ಅವರು, ಒತ್ತೆಯಾಳಾಗಿಟ್ಟುಕೊಂಡವರನ್ನು ಷರತ್ತುಗಳಿಲ್ಲದೇ ಬಿಡುಗಡೆ ಮಾಡಲು ಹಮಾಸ್ ಉಗ್ರರಲ್ಲಿ ಮನವಿ ಮಾಡಿದ್ದಾರೆ. ಗಾಜಾದಲ್ಲಿ ಸಿಲುಕಿರುವ ಜನರಿಗೆ ಈಜಿಪ್ಟ್, ಜೋರ್ಡಾನ್, ವೆಸ್ಟ್ ಬ್ಯಾಂಕ್ ಮತ್ತು ಇಸ್ರೇಲ್‌ನಿಂದ ಆಹಾರ, ನೀರು, ವೈದ್ಯಕೀಯ ಸವಲತ್ತು ಸೇರಿದಂತೆ ಇತರ ಅವಶ್ಯಕಗಳನ್ನು ಸರಬರಾಜು ಮಾಡಲು ಕೋರಿದ್ದಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *