ಇಸ್ರೇಲ್ ಪರ ಸ್ಟೇಟಸ್ ಹಾಕಿದ್ದೇ ಎಡವಟ್ಟಾಯ್ತು, ಕ್ಷಮೆ ಕೇಳಿದ್ರೂ ನೋ ಯೂಸ್..! – ಬಹರೈನ್‌ನಲ್ಲಿ ಉದ್ಯೋಗ ಕಳೆದುಕೊಂಡ ಮಂಗಳೂರು ಮೂಲದ ಡಾಕ್ಟರ್‌

ಇಸ್ರೇಲ್ ಪರ ಸ್ಟೇಟಸ್ ಹಾಕಿದ್ದೇ ಎಡವಟ್ಟಾಯ್ತು, ಕ್ಷಮೆ ಕೇಳಿದ್ರೂ ನೋ ಯೂಸ್..! – ಬಹರೈನ್‌ನಲ್ಲಿ ಉದ್ಯೋಗ ಕಳೆದುಕೊಂಡ ಮಂಗಳೂರು ಮೂಲದ ಡಾಕ್ಟರ್‌

ನ್ಯೂಸ್‌ ಆ್ಯರೋ : ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ದಿನದಿಂದ ದಿನಕ್ಕೆ ಭೀಕರವಾಗುತ್ತಿದೆ. ಈ ಮಧ್ಯೆ ಯುದ್ಧದ ಬಗ್ಗೆ ಬಹರೈನ್‌ನಲ್ಲಿ ಸ್ಟೇಟಸ್‌ ಹಾಕಿದ್ದ ಕರ್ನಾಟಕ ವೈದ್ಯರೊಬ್ಬರು ತಮ್ಮ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ.

ಕರ್ನಾಟಕ ಮೂಲದ ವೈದ್ಯ ಡಾ.ಸುನೀಲ್ ಜೆ. ರಾವ್ ಅವರು ಇಸ್ರೇಲ್​ನಲ್ಲಿನ ಯುದ್ಧ ಪರಿಸ್ಥಿತಿಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್​ನಲ್ಲಿ ಸ್ಟೇಟಸ್​ ಹಾಕಿದ್ದ ಕೊನೆಗೆ ಸ್ಟೇಟಸ್​ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದಾರೆ. ಆದರೂ ಅವರು ಉದ್ಯೋಗ ಕಳೆದುಕೊಳ್ಳುವಂತಾಗಿದೆ.

ಈ ವೈದ್ಯರು ಬಹರೈನ್​ನ ದ ರಾಯಲ್ ಬಹರೈನ್ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿದ್ದು, ಪ್ಯಾಲೆಸ್ತೀನಿಯರ ವಿರುದ್ಧ ಎಕ್ಸ್​ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಡಾ.ಸುನಿಲ್ ರಾವ್ ಸ್ಟೇಟಸ್ ಅವರ ವೈಯಕ್ತಿಕ ಅಭಿಪ್ರಾಯ. ಅದಕ್ಕೂ ಆಸ್ಪತ್ರೆಗೂ ಸಂಬಂಧವಿಲ್ಲ. ಅದಾಗ್ಯೂ ಅವರು ಸಮಾಜಕ್ಕೆ ಅಪರಾಧ ಅನಿಸುವಂಥ ಸ್ಟೇಟಸ್ ಹಾಕಿರುವುದರಿಂದ ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಉದ್ಯೋಗದಿಂದ ತೆಗೆಯಲಾಗಿದೆ ಎಂದು ದ ರಾಯಲ್ ಬಹರೈನ್ ಆಸ್ಪತ್ರೆ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಕ್ಷಮೆ ಕೇಳಿದ್ದ ಡಾ.ಸುನಿಲ್‌ ರಾವ್, ನನ್ನ ಮಾತು ಮತ್ತು ಕಾರ್ಯಗಳಿಗಾಗಿ ನಾನು ತೀವ್ರವಾಗಿ ವಿಷಾದಿಸುತ್ತೇನೆ. ನಾನು ಈ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಗಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಪ್ರಸ್ತುತ ಘಟನೆಯ ಸಂದರ್ಭದಲ್ಲಿ ಇದು ಸಂವೇದನಾರಹಿತವಾಗಿತ್ತು. ವೈದ್ಯನಾಗಿ ಹೇಳುತ್ತೇನೆ, ಎಲ್ಲ ಜೀವಗಳು ಮುಖ್ಯ ಎಂಬುದಾಗಿ ಹೇಳಿದ್ದರು.

ಅಲ್ಲದೆ, ನಾನು ಕಳೆದ ಹತ್ತು ವರ್ಷಗಳಿಂದ ಇಲ್ಲಿದ್ದು, ಈ ದೇಶ, ದೇಶದ ಜನರು ಮತ್ತು ಧರ್ಮವನ್ನು ಗೌರವಿಸುತ್ತೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೂ ಉದ್ಯೋಗವನ್ನು ಅವರು ಕಳೆದುಕೊಳ್ಳುವಂತಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *