ಚಂದ್ರನತ್ತ ಸಾಗಿದ ಜಪಾನ್ ನ ಲ್ಯಾಂಡರ್‌ – ಜಪಾನ್ ಯಶಸ್ವಿ ಉಡಾವಣೆ, ಇಸ್ರೋ ಶ್ಲಾಘನೆ

ಚಂದ್ರನತ್ತ ಸಾಗಿದ ಜಪಾನ್ ನ ಲ್ಯಾಂಡರ್‌ – ಜಪಾನ್ ಯಶಸ್ವಿ ಉಡಾವಣೆ, ಇಸ್ರೋ ಶ್ಲಾಘನೆ

ನ್ಯೂಸ್ ಆ್ಯರೋ : ಭಾರತದ ಸಾಧನೆ ಬೆನ್ನಲ್ಲೇ ಇದೀಗ ಜಪಾನ್ ಬಾಹ್ಯಾಕಾಶ ಶೋಧನಾ ಏಜೆನ್ಸಿ ಚಂದ್ರನ ಅನ್ವೇಷಣೆಗಾಗಿ ಲ್ಯಾಂಡರ್ ಹೊತ್ತ ರಾಕೆಟ್ ಅನ್ನು ಯಶಸ್ವಿಯಾಗಿ ಇಂದು ಉಡಾವಣೆ ಮಾಡಿದೆ.

ಜಪಾನ್‌ ಬಾಹ್ಯಾಕಾಶ ಶೋಧನಾ ಏಜೆನ್ಸಿಯ ಯಶಸ್ವಿ ರಾಕೆಟ್ ಉಡ್ಡಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶುಭಾಶಯ ಹೇಳಿದೆ. ತನ್ನ ಎಕ್ಸ್‌ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಇಸ್ರೊ, ಜಾಗತಿಕ ಬಾಹ್ಯಾಕಾಶ ಸಮುದಾಯದಿಂದ ಚಂದ್ರನದ ಅನ್ವೇಷಣೆಗಾಗಿ ಕಳುಹಿಸಿದ ಮತ್ತೊಂದು ಯಶಸ್ವಿ ಉಡ್ಡಯಕ್ಕೆ ಅಭಿನಂದನೆಗಳು ಸಲ್ಲಿಸಿದೆ.

ಈ ಲ್ಯಾಂಡರ್ ಮುಂದಿನ ವರ್ಷ ಫೆಬ್ರವರಿಯಲ್ಲಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ. ಜಪಾನ್‌ನ ಈ ಬಾಹ್ಯಾಕಾಶ ಯೋಜನೆ ಯಶಸ್ವಿಯಾದಲ್ಲಿ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸಿದ ಜಗತ್ತಿನ 5ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಜಪಾನ್ ಪಾತ್ರವಾಗಲಿದೆ.

ಜಾಕ್ಸ್‌ನ ಅಧ್ಯಕ್ಷ ಹಿರೋಷಿ ಯಮಕಾವ ಮಾತನಾಡಿ, ಚಂದ್ರನ ಅಂಗಳದಲ್ಲಿ ಎಲ್ಲಿಯಾದರೂ ಇಳಿಯುವುದಕ್ಕಿಂತ, ಉದ್ದೇಶಿತ ಜಾಗದ ಅತ್ಯಂತ ಸಮೀಪದಲ್ಲಿ ಇಳಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಎರಡು ಬಾರಿ ವಿಫಲಗೊಂಡ ಜಪಾನ್
ಚಂದ್ರನ ಅನ್ವೇಷಣೆಗಾಗಿ ಎರಡು ಬಾರಿ ನಡೆಸಿದ ಪ್ರಯತ್ನದಲ್ಲಿ ಜಪಾನ್ ವಿಫಲಗೊಂಡಿತ್ತು. ಕಳೆದ ನವೆಂಬರ್‌ನಲ್ಲಿ ಜಾಕ್ಸ್ ಕಳುಹಿಸಿದ್ದ ಒಮೊಟೆನಾಷಿ ಎಂಬ ಲ್ಯಾಂಡರ್‌ ಲ್ಯಾಂಡಿಂಗ್ ವೇಳೆಯಲ್ಲಿ ಸಂಪರ್ಕ ಕಳೆದುಕೊಂಡಿತು. ಹುಕುಟೊ ಆರ್‌ ಮಿಷನ್ 1 ಲ್ಯಾಂಡರ್‌ ಅನ್ನು ಕಳೆದ ಏಪ್ರಿಲ್‌ನಲ್ಲಿ ಕಳುಹಿಸಲಾಗಿತ್ತು. ಚಂದ್ರನ ಅಂಗಳದಲ್ಲಿ ಇಳಿಯುವ ಹಂತದಲ್ಲಿ ಅದು ಪತನಗೊಂಡಿತು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *