ಅ.7ರ ದಾಳಿಯ ರೂವಾರಿಯನ್ನು ಕೊಂದು ಹಾಕಿದ ಇಸ್ರೇಲ್ – ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ಇಸ್ರೇಲ್ ದಾಳಿಗೆ ಬಲಿ

ಅ.7ರ ದಾಳಿಯ ರೂವಾರಿಯನ್ನು ಕೊಂದು ಹಾಕಿದ ಇಸ್ರೇಲ್ – ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ಇಸ್ರೇಲ್ ದಾಳಿಗೆ ಬಲಿ

ನ್ಯೂಸ್ ಆ್ಯರೋ : ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ತಕ್ಕ ಮಟ್ಟಿಗೆ ಯಶಸ್ಸು ಸಾಧಿಸಿದ್ದು, ಇಸ್ರೇಲ್ ನ ವಾಯುಪಡೆಯು ಹಮಾಸ್ ನ ಕೇಂದ್ರ ಜಬಾಲಿಯಾ ಬೆಟಾಲಿಯನ್ ಕಮಾಂಡರ್ ಇಬ್ರಾಹಿಂ ಬಿಯಾರಿಯನ್ನು ಹತ್ಯೆ ಮಾಡಿದೆ ಎಂದು ಇಸ್ರೇಲ್ ನ ಭದ್ರತಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ರೇಲಿ ರಕ್ಷಣಾ ಪಡೆಗಳ ಪ್ರಕಾರ, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ರೂವಾರಿ ಇಬ್ರಾಹಿಂ ಬಿಯಾರಿ. ಈ ಉದ್ದೇಶಿತ ದಾಳಿಯು ಈ ಪ್ರದೇಶದಲ್ಲಿ ಹಮಾಸ್ ನ ಕಮಾಂಡ್ ಮತ್ತು ನಿಯಂತ್ರಣವನ್ನು ಅಡ್ಡಿಪಡಿಸಿದ್ದಲ್ಲದೆ, ಬಿಯಾರಿ ಸುತ್ತಮುತ್ತಲಿನ ಗಣನೀಯ ಸಂಖ್ಯೆಯ ಭಯೋತ್ಪಾದಕರನ್ನು ಹತ್ಯೆ ಮಾಡಲು ಕಾರಣವಾಯಿತು ಎಂದು ಐಡಿಎಫ್ ಹೇಳಿಕೊಂಡಿದೆ.

ಹಲವು ವರ್ಷಗಳ ಹಿಂದಿನಿಂದಲೇ ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಬಿಯಾರಿ ಭಾಗಿಯಾಗಿದ್ದ. ಕಳೆದ ಅಕ್ಟೋಬರ್ 7 ರಂದು ನುಖ್ಬಾ ಭಯೋತ್ಪಾದಕರನ್ನು ಇಸ್ರೇಲ್ಗೆ ಕಳುಹಿಸುವಲ್ಲಿ ಆತನ ಪಾತ್ರ ಮುಖ್ಯವಾಗಿತ್ತು.

ಈತ 2004 ರಲ್ಲಿ ಅಶ್ದೋಡ್ ಬಂದರಿನ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ. ಹೆಚ್ಚುವರಿಯಾಗಿ, ಎರಡು ದಶಕಗಳ ಅವಧಿಯಲ್ಲಿ ಇಸ್ರೇಲ್ ಕಡೆಗೆ ರಾಕೆಟ್ ದಾಳಿಗಳನ್ನು ನಿರ್ದೇಶಿಸುವಲ್ಲಿ ಮತ್ತು ಐಡಿಎಫ್ ಪಡೆಗಳ ವಿರುದ್ಧ ದಾಳಿಗಳನ್ನು ಮುನ್ನಡೆಸುವಲ್ಲಿ ಬಿಯಾರಿ ಪ್ರಮುಖ ಪಾತ್ರ ವಹಿಸಿದ್ದ. ಇತ್ತೀಚಿನ ದಿನಗಳಲ್ಲಿ ಉತ್ತರ ಗಾಜಾ ಪಟ್ಟಿಯಲ್ಲಿ ಐಡಿಎಫ್ ಪಡೆಗಳ ವಿರುದ್ಧದ ಹೋರಾಟವನ್ನು ನಿರ್ವಹಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಂದು ಐಡಿಎಫ್ ಹೇಳಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *