ಪ್ರಶಸ್ತಿಗೆ ಚೂಪಾದ ರೆಕ್ಕೆ ಇದ್ದ ಕಾರಣಕ್ಕೆ ಸಂದೇಹ – ಕಲಾವಿದ ವೀರ್ ದಾಸ್‌ ‘ಎಮ್ಮಿ’ಪ್ರಶಸ್ತಿ ಏರ್ ಪೋರ್ಟ ನಲ್ಲಿ ತಪಾಸಣೆ..!

ಪ್ರಶಸ್ತಿಗೆ ಚೂಪಾದ ರೆಕ್ಕೆ ಇದ್ದ ಕಾರಣಕ್ಕೆ ಸಂದೇಹ – ಕಲಾವಿದ ವೀರ್ ದಾಸ್‌ ‘ಎಮ್ಮಿ’ಪ್ರಶಸ್ತಿ ಏರ್ ಪೋರ್ಟ ನಲ್ಲಿ ತಪಾಸಣೆ..!

ನ್ಯೂಸ್ ಆ್ಯರೋ : ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದು ಬಂದಾಗ ತನಗೆ ಎಲ್ಲರಿಂದ ಗೌರವ ಸಿಗುತ್ತದೆ ಎಂದುಕೊಂಡಿದ್ದ ಕಲಾವಿದರೊಬ್ಬರಿಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಶಾಕ್ ದೊರೆತಿದೆ.

ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಮ್ಮಿ’ ಪ್ರಶಸ್ತಿ ಪಡೆದು ಬಂದ ನಟ ಹಾಗೂ ಹಾಸ್ಯ ಕಲಾವಿದ ವೀರ್‌ ದಾಸ್ ಬೆಂಗಳೂರಿಗೆ ಬಂದಾಗ ವಿಮಾನ ನಿಲ್ದಾಣ ಸಿಬ್ಬಂದಿ ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ರಶಸ್ತಿಯ ಟ್ರೋಫಿ ಎಂದು ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಕಲಾವಿದ ವೀರ್‌ ದಾಸ್ ಇತ್ತೀಚೆಗೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಮ್ಮಿ’ ಪ್ರಶಸ್ತಿ ಪಡೆದು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಪ್ರಶಸ್ತಿಯ ಟ್ರೋಫಿಯನ್ನು ವಶಕ್ಕೆ ತೆಗೆದುಕೊಂಡು ತಪಾಸಣೆಗೆ ಒಳಪಡಿಸಿದರು ಎಂದು ಅವರು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಬ್ಯಾಗ್‌ನಲ್ಲಿ ಚೂಪಾದ ಮೂರ್ತಿ ಇದೆಯೇ ಎಂದು ಭದ್ರತಾ ಸಿಬ್ಬಂದಿಯೊಬ್ಬರು ಪ್ರಶ್ನಿಸಿದ್ದು ಆಗ ನಾನು ಇಲ್ಲ ಸರ್‌ ಅದು ಪ್ರಶಸ್ತಿ. ಅದಕ್ಕೆ ಚೂಪಾದ ರೆಕ್ಕೆ ಇವೆ’ ಎಂದು ಹೇಳಿದ್ದೇನೆ. ಬಳಿಕ ಅದನ್ನು ತೆಗೆದು ಅಧಿಕಾರಿಗೆ ತೋರಿಸಿದೆ. ಅವರು ಅದನ್ನು ನೋಡಿ ಪರಿಶೀಲಿಸಿ ಚೆನ್ನಾಗಿದೆ. ನೀವೇನು ಮಾಡುತ್ತೀರಿ ಎಂದು ಕೇಳಿದ್ದಾರೆ. ಅದಕ್ಕೆ ನಾನು, ತಮಾಷೆ ಮಾಡುತ್ತೇನೆ ಎಂದೆ. ಆಗ ಅವರು ನಕ್ಕು ನನ್ನನ್ನು ಬೀಳ್ಕೊಟ್ಟರು ಎಂದು ವೀರ್ ತಿಳಿಸಿದ್ದಾರೆ.

ಮನುಷ್ಯನ ಆಕಾರದಲ್ಲಿರುವ ಎಮ್ಮಿ ಪ್ರಶಸ್ತಿಯು ಇದರ ಬಾಹುಗಳನ್ನು ಹೊಂದಿದ್ದ ಅದಕ್ಕೆ ಚೂಪಾದ ಎರಡು ರೆಕ್ಕೆಗಳಿರುತ್ತವೆ. ಇದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗೆ ಕೊಂಚ ಶಂಕೆ ಮೂಡಿಸಿತ್ತು. ಏನೇ ಆಗಲಿ ನಮ್ಮ ಭದ್ರತಾ ಸಿಬ್ಬಂದಿ ನಮ್ಮ ನಾಡು, ಜನರ ರಕ್ಷಣೆಗೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂಬುದು ಇದರಿಂದ ಸಾಬೀತಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *