ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿ ನಡೆಯಲಿದೆ.

ಒಟ್ಟು 230 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಈ ಹುದ್ದೆಗಳಿಗೆ ಸೆಪ್ಟೆಂಬರ್​ 1ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಸೆಪ್ಟೆಂಬರ್​ 30 ಆಗಿದೆ. ನವೆಂಬರ್ 4 ಮತ್ತು 6ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಹುದ್ದೆ ವಿವರ : ಗ್ರೂಪ್​ ಸಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪಡೆದಿರಬೇಕು. ಪದವಿಯಲ್ಲಿ ಒಂದು ವಿಷಯ ಅರ್ಥಶಾಸ್ತ್ರ ಅಥವಾ ಗಣಿತವನ್ನು ಅಧ್ಯಯನ ಮಾಡಿರಬೇಕು. ಅಥವಾ ಕಾಮರ್ಸ್​​ ಪದವಿಯನ್ನು ಅಧ್ಯಯನ ಮಾಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ 18 ವರ್ಷವಾಗಿದ್ದು, ಗರಿಷ್ಠ ವಯೋಮಿತಿ 35ವರ್ಷ ಆಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ : ಈ ಹುದ್ದೆಗಳಿಗೆ ಮಾಸಿಕ ₹33,450 ನಿಂದ ₹62,600 ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ಮಾಜಿ ಸೇವಾ ಅಭ್ಯರ್ಥಿಗಳಿಗೆ 50 ರೂ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

Related post

ಇಂದಿನಿಂದ ಚಾರ್‌ಧಾಮ್ ಯಾತ್ರೆ ಆರಂಭ: ಬುಕ್ಕಿಂಗ್ ತುಂಬಾ ಸುಲಭ

ಇಂದಿನಿಂದ ಚಾರ್‌ಧಾಮ್ ಯಾತ್ರೆ ಆರಂಭ: ಬುಕ್ಕಿಂಗ್ ತುಂಬಾ ಸುಲಭ

ನ್ಯೂಸ್ ಆ್ಯರೋ : ಬದರಿನಾಥ್ ಧಾಮ್, ಯಮುನೋತ್ರಿ ಧಾಮ್‌, ಕೇದಾರನಾಥ ಧಾಮ್ ಮತ್ತು ಗಂಗೋತ್ರಿ ಧಾಮ್ ಕ್ಷೇತ್ರಗಳನ್ನು ಸಂದರ್ಶಿಸುವುದನ್ನು ಚಾರ್ ಧಾಮ್ ಯಾತ್ರಾ ಎಂದು ಕರೆಯುತ್ತಾರೆ. ಇಂತಹ ಪವಿತ್ರವಾದ…
ದಿನ‌ ಭವಿಷ್ಯ 10-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 10-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ಇಂದು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವವರು ತಮ್ಮ…
7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…

Leave a Reply

Your email address will not be published. Required fields are marked *