ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಕೊಲೆ ಬೆದರಿಕೆ – ಈ ಬಾರಿ ಬರೋಬ್ಬರಿ 200 ಕೋಟಿ ಬೇಡಿಕೆ ಇಟ್ಟ ಅಪರಿಚಿತ..!

ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಕೊಲೆ ಬೆದರಿಕೆ – ಈ ಬಾರಿ ಬರೋಬ್ಬರಿ 200 ಕೋಟಿ ಬೇಡಿಕೆ ಇಟ್ಟ ಅಪರಿಚಿತ..!

ನ್ಯೂಸ್ ಆ್ಯರೋ : ಒಂದು ವಾರದ ಅಂತರದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಮುಕೇಶ್ ಅಂಬಾನಿ ಅವರಿಗೆ ಎರಡು ಜೀವ ಬೆದರಿಕೆಯ ಇಮೇಲ್ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅಂಬಾನಿಗೆ ಮೇಲಿಂದ ಮೇಲೆ ಕೊಲೆ ಬೆದರಿಕೆಯ ಇಮೇಲ್‍ಗಳು ಬರುತ್ತಿವೆ. ಒಂದೇ ವಾರದಲ್ಲಿ, ಒಂದೇ ಅಕೌಂಟ್‍ನಿಂದ ಎರಡು ಬಾರಿ ಬೆದರಿಕೆಯ ಇಮೇಲ್ ಬಂದಿದ್ದು, ಈ ಬಾರಿ ₹200 ಕೋಟಿ ಬೇಡಿಕೆಯನ್ನು ಇಡಲಾಗಿದೆ.

₹200 ಕೋಟಿ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ:

₹ 20 ಕೋಟಿ ಬೇಡಿಕೆ ಇಟ್ಟು ಕಳುಹಿಸಲಾಗಿದ್ದ ಇಮೇಲ್‍ಗೆ ಪ್ರತಿಕ್ರಿಯಿಸದಿದ್ದಕ್ಕೆ ಸೇಮ್ ಅಕೌಂಟ್‍ನಿಂದ ಮತ್ತೊಂದು ಜೀವಬೆದರಿಕೆಯ ಇಮೇಲ್ ಬಂದಿದೆ. ಎರಡನೇ ಬಾರಿ ಬಂದಿರುವ ಇಮೇಲ್‍ನಲ್ಲಿ, ನಾವು ಕಳುಹಿಸಿರುವ ಇಮೇಲ್‍ಗೆ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಇದೀಗ 20 ಕೋಟಿಯಿಂದ 200 ಕೋಟಿಗೆ ಏರಿಕೆ ಮಾಡಲಾಗಿದೆ. ಒಂದು ವೇಳೆ ಹಣ ನೀಡದೇ ಇದ್ದರೆ ಕೊಲೆ ಮಾಡುವುದಾಗಿ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಕಳಿಸಿದ್ದ ಬೆದರಿಕೆಯಲ್ಲಿ 20 ಕೋಟಿಗೆ ಬೇಡಿಕೆ ಇಡಲಾಗಿತ್ತು. ಕೇಳಿದಷ್ಟು ಹಣ ಕೊಡದಿದ್ದರೆ ಶೂಟ್ ಮಾಡುವುದಾಗಿ ಜೀವ ಬೆದರಿಕೆ ಹಾಕಲಾಗಿತ್ತು. ಅಲ್ಲದೆ ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಎಂದು ತಿಳಿಸಲಾಗಿತ್ತು.

ಸದ್ಯ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ದಕ್ಷಿಣ ಮುಂಬೈನ ಗಾಮ್‍ದೇವಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ (ಐಪಿಸಿ) 387 ಮತ್ತು 506 (2) ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *