ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಕೊಲೆ ಬೆದರಿಕೆ – ಈ ಬಾರಿ ಬರೋಬ್ಬರಿ 200 ಕೋಟಿ ಬೇಡಿಕೆ ಇಟ್ಟ ಅಪರಿಚಿತ..!

ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಕೊಲೆ ಬೆದರಿಕೆ – ಈ ಬಾರಿ ಬರೋಬ್ಬರಿ 200 ಕೋಟಿ ಬೇಡಿಕೆ ಇಟ್ಟ ಅಪರಿಚಿತ..!

ನ್ಯೂಸ್ ಆ್ಯರೋ : ಒಂದು ವಾರದ ಅಂತರದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಮುಕೇಶ್ ಅಂಬಾನಿ ಅವರಿಗೆ ಎರಡು ಜೀವ ಬೆದರಿಕೆಯ ಇಮೇಲ್ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅಂಬಾನಿಗೆ ಮೇಲಿಂದ ಮೇಲೆ ಕೊಲೆ ಬೆದರಿಕೆಯ ಇಮೇಲ್‍ಗಳು ಬರುತ್ತಿವೆ. ಒಂದೇ ವಾರದಲ್ಲಿ, ಒಂದೇ ಅಕೌಂಟ್‍ನಿಂದ ಎರಡು ಬಾರಿ ಬೆದರಿಕೆಯ ಇಮೇಲ್ ಬಂದಿದ್ದು, ಈ ಬಾರಿ ₹200 ಕೋಟಿ ಬೇಡಿಕೆಯನ್ನು ಇಡಲಾಗಿದೆ.

₹200 ಕೋಟಿ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ:

₹ 20 ಕೋಟಿ ಬೇಡಿಕೆ ಇಟ್ಟು ಕಳುಹಿಸಲಾಗಿದ್ದ ಇಮೇಲ್‍ಗೆ ಪ್ರತಿಕ್ರಿಯಿಸದಿದ್ದಕ್ಕೆ ಸೇಮ್ ಅಕೌಂಟ್‍ನಿಂದ ಮತ್ತೊಂದು ಜೀವಬೆದರಿಕೆಯ ಇಮೇಲ್ ಬಂದಿದೆ. ಎರಡನೇ ಬಾರಿ ಬಂದಿರುವ ಇಮೇಲ್‍ನಲ್ಲಿ, ನಾವು ಕಳುಹಿಸಿರುವ ಇಮೇಲ್‍ಗೆ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಇದೀಗ 20 ಕೋಟಿಯಿಂದ 200 ಕೋಟಿಗೆ ಏರಿಕೆ ಮಾಡಲಾಗಿದೆ. ಒಂದು ವೇಳೆ ಹಣ ನೀಡದೇ ಇದ್ದರೆ ಕೊಲೆ ಮಾಡುವುದಾಗಿ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಕಳಿಸಿದ್ದ ಬೆದರಿಕೆಯಲ್ಲಿ 20 ಕೋಟಿಗೆ ಬೇಡಿಕೆ ಇಡಲಾಗಿತ್ತು. ಕೇಳಿದಷ್ಟು ಹಣ ಕೊಡದಿದ್ದರೆ ಶೂಟ್ ಮಾಡುವುದಾಗಿ ಜೀವ ಬೆದರಿಕೆ ಹಾಕಲಾಗಿತ್ತು. ಅಲ್ಲದೆ ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಎಂದು ತಿಳಿಸಲಾಗಿತ್ತು.

ಸದ್ಯ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ದಕ್ಷಿಣ ಮುಂಬೈನ ಗಾಮ್‍ದೇವಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ (ಐಪಿಸಿ) 387 ಮತ್ತು 506 (2) ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *