ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ – ಕೋಸ್ಟ್‌ ಗಾರ್ಡ್‌ನಲ್ಲಿ 255 ಹುದ್ದೆಗೆ ಅರ್ಜಿ ಆಹ್ವಾನ, ಫೆ.16ರಂದು ಸರ್ಜಿ ಸಲ್ಲಿಕೆಗೆ ಕೊನೆ ದಿನ

ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ – ಕೋಸ್ಟ್‌ ಗಾರ್ಡ್‌ನಲ್ಲಿ 255 ಹುದ್ದೆಗೆ ಅರ್ಜಿ ಆಹ್ವಾನ, ಫೆ.16ರಂದು ಸರ್ಜಿ ಸಲ್ಲಿಕೆಗೆ ಕೊನೆ ದಿನ

ನ್ಯೂಸ್ ಆ್ಯರೋ : ಇಂಡಿಯನ್ ಕೋಸ್ಟ್​ ಗಾರ್ಡ್‌ನಲ್ಲಿ ಖಾಲಿ ಇರುವ 255 ನಾವಿಕ ಹುದ್ದೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋಸ್ಟ್​ ಗಾರ್ಡ್​​ನಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಕೊಳ್ಳಬಹುದು.

ಒಟ್ಟು 255 ನಾವಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ಫೆಬ್ರವರಿ 16ರಂದು ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದ್ದು, ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನೂ ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ.

ಸಂಸ್ಥೆ: ಇಂಡಿಯನ್ ಕೋಸ್ಟ್​ ಗಾರ್ಡ್
ಹುದ್ದೆ: ನಾವಿಕ
ಒಟ್ಟು ಹುದ್ದೆ: 255
ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ/ ಪಿಯುಸಿ ಪಾಸಾಗಿರಬೇಕು
ವೇತನ: ₹21,700
ಉದ್ಯೋಗದ ಸ್ಥಳ: ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 16, 2023

ಹುದ್ದೆಯ ಮಾಹಿತಿ:

ನಾವಿಕ (ಜನರಲ್ ಡ್ಯೂಟಿ)- 225
ನಾವಿಕ (ಡೊಮೆಸ್ಟಿಕ್ ಬ್ರಾಂಚ್)- 30

ವಿದ್ಯಾರ್ಹತೆ:

ನಾವಿಕ (ಜನರಲ್ ಡ್ಯೂಟಿ)- ಪಿಯುಸಿ
ನಾವಿಕ (ಡೊಮೆಸ್ಟಿಕ್ ಬ್ರಾಂಚ್)- 10ನೇ ತರಗತಿ

ವಯೋಮಿತಿ:

ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:

SC/ST ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 300 ರೂ.
ಪಾವತಿಸುವ ವಿಧಾನ-ಆನ್​ಲೈನ್​

ಆಯ್ಕೆ ಪ್ರಕ್ರಿಯೆ ಹೀಗಿದೆ:

ಮೊದಲನೇ ಹಂತ– ಲಿಖಿತ ಪರೀಕ್ಷೆ

ಎರಡನೇ ಹಂತ– ದೈಹಿಕ ಸಾಮರ್ಥ್ಯದ ಪರೀಕ್ಷೆ, ದಾಖಲಾತಿ ಪರಿಶೀಲನೆ, ಇನಿಶಿಯಲ್ ಮೆಡಿಕಲ್ಸ್​ ಎಕ್ಸಾಮಿನೇಷನ್

ಮೂರನೇ ಹಂತ–ದಾಖಲಾತಿ ಪರಿಶೀಲನೆ, ಫೈನಲ್ ಮೆಡಿಕಲ್ ಎಕ್ಸಾಮಿನೇಷನ್, ಒರಿಜಿನಲ್ ಡಾಕ್ಯುಮೆಂಟ್, ಪೊಲೀಸ್ ವೆರಿಫಿಕೇಶನ್.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *