ಮಂಗಳೂರು ಬಂದರಿನಲ್ಲಿ ತಿಂಗಳಿಗೆ 1.40 ಲಕ್ಷ ವೇತನ‌ ಇರೋ‌ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ – ಡಿಗ್ರಿ ಮುಗಿಸಿದವರಿಗೆ ಬಂಪರ್ ಅವಕಾಶ…!!

ಮಂಗಳೂರು ಬಂದರಿನಲ್ಲಿ ತಿಂಗಳಿಗೆ 1.40 ಲಕ್ಷ ವೇತನ‌ ಇರೋ‌ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ – ಡಿಗ್ರಿ ಮುಗಿಸಿದವರಿಗೆ ಬಂಪರ್ ಅವಕಾಶ…!!

ನ್ಯೂಸ್ ಆ್ಯರೋ : ನೀವು ಡಿಗ್ರಿ ಮುಗಿಸಿದ್ದೀರಾ?, ನೀವು ಕೆಲಸ ಹುಡುಕುತ್ತಿದ್ದೀರಾ?, ಹಾಗಿದ್ದರೆ ನಿಮದೊಂದು ಬಂಪರ್ ಉದ್ಯೋಗಾವಕಾಶವಿದೆ‌. ನವ ಮಂಗಳೂರು ಬಂದರು ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಜಿ ಆಹ್ವಾನಿಸಿದೆ. 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಫೆಬ್ರವರಿ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಈ ವಿವರಗಳನ್ನು ತಿಳಿದುಕೊಳ್ಳಿ.

ಶೈಕ್ಷಣಿಕ ಅರ್ಹತೆಗಳೇನು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.

ವಯೋಮಿತಿ ಹೀಗಿರಬೇಕು..

ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆಯಂತೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಜೊತೆಗೆ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತಾದೆ.

ಮಾಸಿಕ ವೇತನ :

ಈ ಉದ್ಯೋಗಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000- 1.40 ಲಕ್ಷ ಸಂಬಳ ನೀಡಲಾಗುತ್ತದೆ.

ಉದ್ಯೋಗ ಸ್ಥಳ :

ಮಂಗಳೂರುನಲ್ಲಿರುವ ‘ನವ ಮಂಗಳೂರು ಬಂದರು ಪ್ರಾಧಿಕಾರ’ .

ಆಯ್ಕೆ ಪ್ರಕ್ರಿಯೆ ಹೇಗೆ ?

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವಿರುತ್ತದೆ.

ಅರ್ಜಿ ಸಲ್ಲಿಕೆ ವಿಧಾನ :

ಅಭ್ಯರ್ಥಿಗಳು ಭರ್ತಿ‌ ಮಾಡಿದ ಅರ್ಜಿಗಳನ್ನು

ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010
ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸು 12/1/2023 ಆರಂಭದ ದಿನಾಂಕವಾಗಿದ್ದು, 2023ರ ಫೆಬ್ರವರಿ13 ಕೊನೆ‌ಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *