Jobs : 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ 34 ಸಾವಿರ ; ವಿವರ ಇಲ್ಲಿದೆ..

Jobs : 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ 34 ಸಾವಿರ ; ವಿವರ ಇಲ್ಲಿದೆ..

ನ್ಯೂಸ್ ಆ್ಯರೋ‌ : ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ ನರ್ಸಿಂಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 161 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಬಿಎಸ್ಸಿ ಮತ್ತು ಮಿಡ್ವೈಫ್ ನರ್ಸ್ ಗಳು
ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಒಟ್ಟು 161 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ನರ್ಸಿಂಗ್ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು. ರಾಜ್ಯ ಅಥವಾ ಭಾರತ ನರ್ಸಿಂಗ್ ಮಂಡಳಿಯಿಂದ ನರ್ಸ್ ಅಥವಾ ಮಿಡ್ವೈಫ್ ನೋಂದಣಿ ಹೊಂದಿರಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎರಡು ವರ್ಷ ನರ್ಸಿಂಗ್ ಹುದ್ದೆ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.

ವೇತನ

ಈ ಹುದ್ದೆಗಳಿಗೆ 9,300 ದಿಂದ 34,800ರೂ ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ತುಂಬಿರಬೇಕು. ಕೇಂದ್ರ ಸರ್ಕಾರದ ನಿಯಮದ ಅನುಸಾರ ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಸಲ್ಲಿಕೆ

ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪರಿಶೀಲಿಸಿ ಮುಂದುವರೆಯಬೇಕು. ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರ ಸೇರಿದಂತೆ ಮತ್ತಿತ್ತರ ವಿವರದೊಂದಿಗೆ ಅರ್ಜಿ ಶುಲ್ಕದ ಮಾಹಿತಿಯನ್ನು ಭರಿಸಬೇಕಿದೆ.

ಅರ್ಜಿ ಶುಲ್ಕ

ಈ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 885 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 1,180 ರೂ ಅರ್ಜಿ ಶುಲ್ಕ ಭರಿಸಬೇಕಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಇನ್ನು ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು , ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 18 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು nimhans.ac.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *