ಪುತ್ತೂರು : ಹುಲಿವೇಷಕ್ಕೆ ಸ್ಟಾರ್ ಗಿರಿ ಕೊಡಿಸಿದ್ದ ಅಕ್ಷಯ್ ಕಲ್ಲೇಗ ಭೀಕರ ಕೊಲೆ ಪ್ರಕರಣ – ನಾಲ್ಕು ಆರೋಪಿಗಳಿಗೆ ನ.22ರವರೆಗೆ ನ್ಯಾಯಾಂಗ ಬಂಧನ

ಪುತ್ತೂರು : ಹುಲಿವೇಷಕ್ಕೆ ಸ್ಟಾರ್ ಗಿರಿ ಕೊಡಿಸಿದ್ದ ಅಕ್ಷಯ್ ಕಲ್ಲೇಗ ಭೀಕರ ಕೊಲೆ ಪ್ರಕರಣ – ನಾಲ್ಕು ಆರೋಪಿಗಳಿಗೆ ನ.22ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ ಆ್ಯರೋ : ಪುತ್ತೂರಿನಲ್ಲಿ ಹುಲಿವೇಷಕ್ಕೆ ಸ್ಟಾರ್ ಗಿರಿ ಕೊಡಿಸಿದ್ದ ಅಕ್ಷಯ್ ಕಲ್ಲೇಗನನ್ನು ಕೊಲೆ ಮಾಡಿದ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳಾದ ಮಂಜುನಾಥ ಹಾಗೂ ಚೇತನ್ ಮತ್ತು ಕೇಶವ, ಮನೀಶ್ ಎಂಬವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನಿನ್ನೆ ಸಂಜೆ ಆರೋಪಿಗಳೊಂದಿಗೆ ಪೋಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಮೂವರು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರಕೊಂಡು ಹೋಗಿ ಮಹಜರು ನಡೆಸಿದರು.

ನೆಹರೂ ನಗರಕ್ಕೆ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕರಕೊಂಡು ಬಂದಾಗ ಆರೋಪಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಜರು ಸ್ಥಳದಲ್ಲೇ ಅಕ್ಷಯ್ ಕಲ್ಲೇಗ ಗುಂಪು ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮನ್ನು ಬಿಡುವುದಿಲ್ಲ ಎಂದು ಆಕೋಶ ವ್ಯಕ್ತಪಡಿಸಿ ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಗಮನಿಸಿದ ಪೋಲಿಸರು ಕೂಡಲೇ ಜನರನ್ನು ಚದುರಿಸಿ ಮಹಜರಿಗೆ ಅನುವು ಮಾಡಿಕೊಟ್ಟಿದ್ದರು.

ನ.7 ರಂದು ಅಂದರೆ ನಿನ್ನೆ ರಾತ್ರಿ ನಾಲ್ಕು ಜನ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಇಂದು ಬೆಳಗ್ಗೆ‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಇನ್ನು ನ್ಯಾಯಾಧೀಶರು ಆರೋಪಿಗಳನ್ನು ನ.22ರ ತನಕ ನ್ಯಾಯಾಂಗ ಬಂಧನಕ್ಕೊಳಪಡಿಸಿ ಎಂದು ಆದೇಶಿಸಿದ್ದು, ಅತ್ತ ಕೊಲೆಯಾದ ಅಕ್ಷಯ್ ಮನೆಯಲ್ಲಿ ಸೂತಕ ಛಾಯೆ ಆವರಿಸಿದೆ‌.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *