ಅಕ್ಷಯ್ ಕಲ್ಲೇಗ ಓರ್ವ ರೌಡಿಶೀಟರ್, ಆತನ ವಿರುದ್ಧವೂ ಪ್ರಕರಣವಿದೆ – ದಕ್ಷಿಣ ಕನ್ನಡ ಎಸ್ಪಿ ಸಿ.ಬಿ. ರಿಷ್ಯಂತ್ ಹೇಳಿಕೆ
- ಕರಾವಳಿ
- November 9, 2023
- No Comment
- 105
ನ್ಯೂಸ್ ಆ್ಯರೋ : ಪುತ್ತೂರಿನಲ್ಲಿ ನಡೆದ ಅಕ್ಷಯ್ ಕಲ್ಲೇಗ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ದ.ಕ ಎಸ್ಪಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ ಬಂದಿರುವ ಮಾಹಿತಿ, ಹಳೇ ವೈಷಮ್ಯದಿಂದ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಅಕ್ಷಯ್ ಕಲ್ಲೇಗ ಕೂಡ ಓರ್ವ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗನ ಪರಿಚಯಸ್ಥರೇ ಆಗಿದ್ದರು.
ಹತ್ಯೆಯ ಹಿಂದೆ ಬೇರೇ ಏನಾದರೂ ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.
ಮಾಧ್ಯಮಗಳ ಮುಂದೆ ಪ್ರಕರಣದ ಸಂಪೂರ್ಣ ಮಾಹಿತಿ ತೆರೆದಿಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಅವರ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಇಲ್ಲಿದೆ.