Mangalore : 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು – ಲೋಕಸಭಾ ಚುನಾವಣೆ ಹಿನ್ನೆಲೆ, ಕಮೀಷನರ್ ಆದೇಶ

Mangalore : 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು – ಲೋಕಸಭಾ ಚುನಾವಣೆ ಹಿನ್ನೆಲೆ, ಕಮೀಷನರ್ ಆದೇಶ

ನ್ಯೂಸ್ ಆ್ಯರೋ : ಲೋಕಸಭೆ ಚುನಾವಣೆ ಮುನ್ನೆಚ್ಚರಿಕೆ ಕ್ರಮವಾಗಿ 19 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವವರ ವಿರುದ್ದ ಕಳೆದ ಎರಡು ದಿನಗಳಲ್ಲಿ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಮಾಡಲಾಗಿದೆ. ಇದು ಹೆಚ್ಚುವರಿಯಾಗಿ 7 ಜನರ ವಿರುದ್ಧ ಈ ತಿಂಗಳ ಆರಂಭದಲ್ಲಿ ಆದೇಶಗಳನ್ನು ಹೊರಡಿಸಲಾಗಿದೆ.

ಮೂಡುಬಿದಿರೆಯ ಅತ್ತೂರು ನಸೀಬ್ (40), ಕಾಟಿಪಳ್ಳದ ಶ್ರೀನಿವಾಸ್ ಎಚ್. (24), ಬಜ್ಪೆ ಶಾಂತಿಗುಡ್ಡದ ಸಫ್ವಾನ್ (28), ಬೋಂದೆಲ್‌ನ ಜಯೇಶ್ ಯಾನೆ ಸಾಚು (28), ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ (30), ಅಶೋಕ ನಗರದ ಅಝೀಝ್ (40), ಕಾವೂರಿನ ಇಶಾಮ್ (30), ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ (28), ಕೈಕಂಬ-ಗಣೇಶ್‌ಪುರದ ದೀಕ್ಷಿತ್ ಪೂಜಾರಿ (23), ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ (27), ಬೊಂಡಂತಿಲದ ಕಿಶೋರ್ ಸನಿಲ್ (36), ಉಳ್ಳಾಲ ಕೋಡಿಯ ಹಸೈನಾರ್ ಅಲಿ (38), ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್ (28), ಬೋಳೂರಿನ ರೋಶನ್ ಕಿಣಿ (18), ಕಸಬಾ ಬೆಂಗರೆಯ ಅಹ್ಮದ್ ಸಿನಾನ್ (21), ಜಪ್ಪಿನಮೊಗರಿನ ದಿತೇಶ್ ಕುಮಾರ್ (28), ಬಜಾಲ್ ಕುತ್ತಡ್ಕದ ಗುರುಪ್ರಸಾದ್ (38) ಮತ್ತು ಭರತ್ ಪೂಜಾರಿ (31), ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ (37) ಗಡಿಪಾರು ಆದೇಶಕ್ಕೆ ಒಳಗಾದ ರೌಡಿಶೀಟರ್‌ಗಳಾಗಿದ್ದಾರೆ.

ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಈ ಕ್ರಮ ಜರಗಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *