ಪುತ್ತೂರು : ಹಿಂದೂ ಮುಖಂಡ ಪುರುಷರಕಟ್ಟೆ ನಿವಾಸಿ ಅವಿನಾಶ್ ಗೆ ಗಡಿಪಾರು – ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು : ಹಿಂದೂ ಮುಖಂಡ ಪುರುಷರಕಟ್ಟೆ ನಿವಾಸಿ ಅವಿನಾಶ್ ಗೆ ಗಡಿಪಾರು – ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ನ್ಯೂಸ್ ಆ್ಯರೋ‌ : ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಆದೇಶ ಹೊರಡಿಸಲಾಗಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಕರ್ನಾಟಕ ಪೊಲೀಸ್‌ ಅಧಿನಿಯಮ-1963 ರ ಕಲಂ:55 ಪ್ರಕಾರ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆ ನಡೆಯಲಿದೆ.

ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ಅವಿನಾಶ್ ಗೆ ತಿಳಿಸಲಾಗಿದೆ.

ಒಂದು ವೇಳೆ ವಿಚಾರಣೆಗೆ ಹಾಜರಾಗದೆ ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದ್ದು, ಮತ್ತೊಮ್ಮೆ ಹಿಂದೂ ಮುಖಂಡರ ಗಡಿಪಾರು ಆದೇಶ ಜಿಲ್ಲಾದ್ಯಂತ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *