ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಬ್ಯಾನರ್ ವಿಚಾರದಲ್ಲಿ ಗೊಂದಲ ಮೂಡಿಸಿದ ಆರೋಪ – ಹಿಂದೂ ಮುಖಂಡ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಬ್ಯಾನರ್ ವಿಚಾರದಲ್ಲಿ ಗೊಂದಲ ಮೂಡಿಸಿದ ಆರೋಪ – ಹಿಂದೂ ಮುಖಂಡ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಸೌಜನ್ಯಾ ಪ್ರಕರಣದ ಮುಂದಾಳು, ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರು ವಿರುದ್ಧ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕ ಒಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿ, ಬಿಜೆಪಿಯ ಮುಖಂಡ ಸಂದೀಪ್ ರೈ ಅವರು ತಿಮರೋಡಿ ಮತ್ತಿತರರ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿನ್ನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ಸಮೀಪದಲ್ಲೇ ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಅಳವಡಿಸಿರುವ ಆರೋಪ ಹೊರಿಸಲಾಗಿದೆ.

ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ, ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ದತೆಯನ್ನು ಸೃಷ್ಟಿಸಿರುವುದಾಗಿ ಆರೋಪಿಸಿ ಸಂದೀಪ್ ರೈ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ. ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಅಲ್ಲದೇ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸಲು ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *