Mangalore : ಸೌದಿ ಅರೇಬಿಯಾದ ತಾಯಿಫ್ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ – ಹಳೆಯಂಗಡಿ ಮೂಲದ ದಂಪತಿ, ಮಗು ಸೇರಿ ನಾಲ್ವರು ಮೃತ್ಯು..!

Mangalore : ಸೌದಿ ಅರೇಬಿಯಾದ ತಾಯಿಫ್ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ – ಹಳೆಯಂಗಡಿ ಮೂಲದ ದಂಪತಿ, ಮಗು ಸೇರಿ ನಾಲ್ವರು ಮೃತ್ಯು..!

ನ್ಯೂಸ್ ಆ್ಯರೋ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ದುರ್ಘಟನೆಯ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಈ ಅಪಘಾತವು ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಳೆಯಂಗಡಿ ತೋಕೂರು ಸರಕಾರಿ ಶಾಲೆಯ ಪಕ್ಕದ ಕುಟುಂಬದ ಮೂಲ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ. ಅಪಘಾತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಆದ್ರೆ ಇತ್ತೀಚೆಗಿನ ವರ್ಷಗಳಲ್ಲಿ ಸೌದಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಈ ಬಗ್ಗೆ ಅಲ್ಲಿನ ರಸ್ತೆ ಸುರಕ್ಷಾ ಪ್ರಾಧಿಕಾರ ಕೂಡ ಕಳವಳ ವ್ಯಕ್ತಪಡಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *