ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ

ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ

ನ್ಯೂಸ್ ಆ್ಯರೋ : ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವ ಸಲ್ಲಿಸಿದರು.

ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ಕ್ಯಾಪ್ಟನ್ ನ ಗಮನಕ್ಕೆ ತಂದರು.

ಬಳಿಕ ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಅಭಿನಂದನೆಯ ವೇಳೆ ಅಕ್ಷರ ಸಂತನ ಕಣ್ಣಲ್ಲಿ ಕಣ್ಣೀರು ಜಿನುಗಿದ್ದು, ವಿಮಾನದ ಪ್ರಯಾಣಿಕರು ಈ ಸುಂದರ ಕ್ಷಣವನ್ನು ಅನುಭವಿಸಿದ್ದಲ್ಲದೇ ವಿಡಿಯೋ ರೆಕಾರ್ಡ್ ಮಾಡಿ ಸ್ಮರಣೀಯವಾಗಿಸಿಕೊಂಡರು.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *