ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ‌ ಆದೇಶ

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ‌ ಆದೇಶ

ನ್ಯೂಸ್ ಆ್ಯರೋ‌ : ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

ಗೃಹ ಸಚಿವರಿಗೆ ಮನವಿ

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು.

ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.

ಕಳೆದ ತಿಂಗಳು ಎಸ್.ಪಿ.ಗೆ ಮನವಿ ನೀಡಿದ್ದ ಮಹೇಶ್ ಶೆಟ್ಟಿ ಗನ್ ಮ್ಯಾನ್ ಒದಗಿಸುವಂತೆ ಕೇಳಿಕೊಂಡಿದ್ದರು. ಆದರೆ ಯಾವುದೇ ಜೀವ ಬೆದರಿಕೆ ಕರೆ ಇಲ್ಲವೆಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಅಂದಿನ ಮನವಿ ಅಂಗೀಕಾರವಾಗಿರಲಿಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *