Mangalore : ಬೆಳ್ಳಾಯೂರು ಮನೆಗೆ ನುಗ್ಗಿ ದರೋಡೆ ಪ್ರಕರಣದ ಖದೀಮರು ಅಂದರ್ – ಬೈಕ್ ಕದ್ದ ಪ್ರಕರಣ ಭೇದಿಸಿದ ಪೋಲಿಸರಿಗೆ ಸಿಕ್ತು ದರೋಡೆಕೋರರ ಜಾಲ..!!

Mangalore : ಬೆಳ್ಳಾಯೂರು ಮನೆಗೆ ನುಗ್ಗಿ ದರೋಡೆ ಪ್ರಕರಣದ ಖದೀಮರು ಅಂದರ್ – ಬೈಕ್ ಕದ್ದ ಪ್ರಕರಣ ಭೇದಿಸಿದ ಪೋಲಿಸರಿಗೆ ಸಿಕ್ತು ದರೋಡೆಕೋರರ ಜಾಲ..!!

ನ್ಯೂಸ್ ಆ್ಯರೋ : ಬೆಳ್ಳಾಯೂರು ಗ್ರಾಮದ ಕೊಳ್ನಾಡಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ದಾವಣಗೆರೆ ಮೂಲದ ರಘು ಎಸ್. (30), ಪ್ರಮೋದ್ ವಿ. (23), ಹೆಚ್. ರವಿಕಿರಣ್ (23), ದಾವಲ ಸಾಬ್ ಹೆಚ್. (25), ಮಂಜುನಾಥ (29) ಬಂಧಿತರು.

ಕಳೆದ ಸೆಪ್ಟೆಂಬರ್ 12ರಂದು ಕೊಲ್ನಾಡಿನ ವಸಂತಿ ಶೆಟ್ಟಿ ಅವರು ಮನೆಯಲ್ಲಿ ಇದ್ದಾಗ ನಾಲ್ಕು ಮಂದಿ ಅಪರಿಚಿತರು ಅವರ 40 ಗ್ರಾಂ ತೂಕದ ಕರಿಮಣಿ ಸರವನ್ನು ದೋಚಿ ಪರಾರಿಯಾಗಿದ್ದರು.

ಅದೇ ದಿನ ಚಂದ್ರಮೌಳೀಶ್ವರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸೂರ್ಯಪ್ರಕಾಶ್ ಅವರ ಬೈಕ್ ಕಳವಾಗಿತ್ತು. ಈ ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡ ಮೂಲ್ಕಿ ಠಾಣೆಯಲ್ಲಿ ಪೊಲೀಸರು ದರೋಡೆಕೋರರಿಗಾಗಿ ತನಿಖೆ ಪ್ರಾರಂಭಿಸಿದ್ದರು.

ಸೆಪ್ಟೆಂಬರ್ 23 ರಂದು ಮೂಲ್ಕಿ ಠಾಣೆಯ ಪಿ.ಎಸ್.ಐ. ಮಾರುತಿ ಪಿ. ಅವರು ಪುನರೂರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಳವಾಗಿದ್ದ ಸೂರ್ಯಪ್ರಕಾಶ್ ಅವರ ಬೈಕ್ ನೊಂದಿಗೆ ಆರೋಪಿ ರಘು ಎಸ್. ನನ್ನು ಬಂಧಿಸಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಅಕ್ಟೋಬರ್ 3ರಂದು ಪೊಲೀಸ್ ನಿರೀಕ್ಷಕ ವಿದ್ಯಾಧರ್ ಡಿ. ಬಯ್ಕೆರಿಕರ್ ಪುನರೂರು ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಸಂಶಯಾಸ್ಪದವಾಗಿ ಕಂಡು ಬಂದ ಎರಡು ಬೈಕ್ ಹಾಗೂ ಒಂದು ಕಾರನ್ನು ವಿಚಾರಣೆಗೆ ಒಳಪಡಿಸಿದಾಗ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಎರಡು ಬೈಕ್, ಒಂದು ಕಾರು, 39.670 ಗ್ರಾಂ ತೂಕದ ತುಂಡಾದ ಕರಿಮಣಿ ಸರ ಸೇರಿದಂತೆ ಒಟ್ಟು 7,63,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *