ಕಡಬ : ಚಿಲ್ಲರೆ ಇಲ್ಲವೆಂದು ಸೈನಿಕನ ತಂದೆಯನ್ನೇ KSRTC ಬಸ್ ನಿಂದ ಕೆಳಗಿಳಿಸಿದ ನಿರ್ವಾಹಕ – ಹಿರಿಯ ಜೀವಕ್ಕೆ ಅಗೌರವ ತೋರಿದ ನಿರ್ವಾಹಕನ ವಿರುದ್ಧ ವ್ಯಾಪಕ ಆಕ್ರೋಶ

ಕಡಬ : ಚಿಲ್ಲರೆ ಇಲ್ಲವೆಂದು ಸೈನಿಕನ ತಂದೆಯನ್ನೇ KSRTC ಬಸ್ ನಿಂದ ಕೆಳಗಿಳಿಸಿದ ನಿರ್ವಾಹಕ – ಹಿರಿಯ ಜೀವಕ್ಕೆ ಅಗೌರವ ತೋರಿದ ನಿರ್ವಾಹಕನ ವಿರುದ್ಧ ವ್ಯಾಪಕ ಆಕ್ರೋಶ

ನ್ಯೂಸ್ ಆ್ಯರೋ : ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಹಿರಿಯ ನಾಗರೀಕರೊಬ್ಬರನ್ನು ಸರ್ಕಾರಿ ಬಸ್ ನಿರ್ವಾಹಕ ಸುಮಾರು ಎರಡು ಕಿಮೀ ದೂರಕ್ಕೆ ಕ್ರಮಿಸಿದ ಬಸ್ ನಿಂದ ಇಳಿಸಿ ತೆರಳಿದ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಸುಮಾರು 75 ವರ್ಷ ಪ್ರಾಯದ  ಬಾಬು ಗೌಡರು ಎಂಬ ಹಿರಿಯ ನಾಗರೀಕರಾಗಿದ್ದು ಇಂದು‌ ದಿನಾಂಕ ಜನವರಿ 6 ರಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕಲ್ಲುಗುಡ್ಡೆಯಿಂದ ಕಾಂಚನ ಎಂಬಲ್ಲಿಗೆ  ತೆರಳಲು ಕಲ್ಲುಗುಡ್ಡೆ ಎಂಬಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹತ್ತಿದ್ದಾರೆ.

ಬೆಳಿಗ್ಗೆ ಒಂಬತ್ತು ಗಂಟೆಗೆ ಕಲ್ಲುಗುಡ್ಡೆ ಯಿಂದ ಹೊರಡುವ ಬಸ್ ಸಂಖ್ಯೆ KA19F3044 ಇದರ ನಿರ್ವಾಹಕರು ಟಿಕೆಟ್ ಗೆ ದುಡ್ಡು ಕೇಳುವಾಗ 200 ರೂ ನೀಡಿದ್ದಾರೆ. ಈ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ನಿರ್ವಾಹಕ  ಹಿರಿಯ ನಾಗರಿಕರಾದ ಬಾಬು ಗೌಡ ಅವರನ್ನು ಕಲ್ಲುಗುಡ್ಡೆಯಿಂದ ಎರಡು ಕಿ.ಮೀ ದೂರದಲ್ಲಿ ಗೋಳಿಯಡ್ಕ ಎಂಬಲ್ಲಿ ಬಲವಂತವಾಗಿ ಇಳಿಸಿ ಹಿರಿಯರಿಗೆ ಅಗೌರವ ತೋರಿದ್ದಾರೆ.

ನಮ್ಮ ದೇಶಕಾಯುವ ಯೋಧರೊಬ್ಬರ ತಂದೆಯಾಗಿರುವ ಬಾಬು ಗೌಡರಿಗೆ ಸುಮಾರು 75 ವರ್ಷ ಪ್ರಾಯವಾಗಿದ್ದು,
ನಿರ್ವಾಹಕನ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬಾಬು ಗೌಡ ಅವರು ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ.

ಸಾರಿಗೆ ಇಲಾಖೆ ಈ ಬಗ್ಗೆ ಗಮನಹರಿಸಿ ನಿರ್ವಾಹಕನ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಈ ರೀತಿ ನಡೆಯದಂತೆ ಜಾಗ್ರತೆ ವಹಿಸಬೇಕು ಎಂದು ಚಂದ್ರಶೇಖರ ಕುರಿಯಾಳ ಕೊಪ್ಪ, ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಕಡಬ ಅವರು ಅಗ್ರಹಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *