Independence Day : ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದ ಕಟೀಲು ದೇವಾಲಯದ ಮಹಾಲಕ್ಷ್ಮಿ ಆನೆ

Independence Day : ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದ ಕಟೀಲು ದೇವಾಲಯದ ಮಹಾಲಕ್ಷ್ಮಿ ಆನೆ

ನ್ಯೂಸ್ ಆ್ಯರೋ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು.

ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇನ್ನು ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೆಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ ದೇವಳದ ಆನೆ ಮಹಾಲಕ್ಷೀ ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆಗೈದಿದ್ದು ವಿಶೇಷವಾಗಿತ್ತು.

ಕಟೀಲು ದೇವರಿಗೂ ಕೇಸರಿ ಬಿಳಿ ಹಸುರು, ಬಣ್ಣದ ಹೂವುಗಳಿಂದ ವಿಶೇಷ ವಾಗಿ ಅಲಂಕಾರ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಗಮನ ಸೆಳೆಯಿತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *