Mangalore : TDR ಕ್ಲಿಯರೆನ್ಸ್ ಗೆ 25 ಲಕ್ಷ ಬೇಡಿಕೆ – ಮೂಡಾ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ…
- ಕರಾವಳಿ
- March 23, 2024
- No Comment
- 762
ನ್ಯೂಸ್ ಆ್ಯರೋ : ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಮನ್ಸೂರ್ ಅಲಿ ಅವರು 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಂದು ಮಂಗಳಾ ಕ್ರೀಡಾಂಗಣದ ಬಳಿ ಟಿಡಿಆರ್ ಕ್ಲಿಯರೆನ್ಸ್ ಮಾಡಲು ಉದ್ಯಮಿ ಗಿರಿಧರ್ ಶೆಟ್ಟಿ ಅವರಿಂದ 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮನ್ಸೂರ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಮುಡಾ ಆಯುಕ್ತ ಮನ್ಸೂರ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದೇ ದಾಳಿಯ ವೇಳೆ ಆಯುಕ್ತ ಮನ್ಸೂರ್ ಅಲಿ ಜೊತೆಗೆ ಬ್ರೋಕರ್ ಎನ್ನಲಾದ ಸಲೀಂ ಎಂಬಾತನನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಬಂಧಿಸಿದ್ದಾರೆ.