ಮಂಗಳೂರು : ಕರಾವಳಿಯಲ್ಲಿ ವ್ಯಾಪಾರ ದಂಗಲ್ – ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್ ಹೇಳಿದ್ದೇನು?

ಮಂಗಳೂರು : ಕರಾವಳಿಯಲ್ಲಿ ವ್ಯಾಪಾರ ದಂಗಲ್ – ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್ ಹೇಳಿದ್ದೇನು?

ನ್ಯೂಸ್ ಆ್ಯರೋ : ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳೇ ವ್ಯಾಪಾರ ಮಾಡಬೇಕು ಎಂಬ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಅಸ್ತಿತ್ವಕ್ಕೆ ಬಂದಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಘಟನೆ ಅಧಿಕೃತವಾಗಿ ಲೋಕಾರ್ಪಣೆಗೊಂಡಿದ್ದು, ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳು ಮಾತ್ರವೇ ವ್ಯಾಪಾರ ಮಾಡಬೇಕು. ಈ ನಿಟ್ಟಿನಲ್ಲಿ ನಿಮ್ಮ ಜೊತೆ ನಾನಿದ್ದೇನೆ” ಎಂದು ವ್ಯಾಪಾರಿಗಳಿಗೆ ಭರವಸೆ ನೀಡಿದ್ದಾರೆ.

ಕಳೆದ ವರ್ಷ ಕರಾವಳಿ ಭಾಗದಲ್ಲಿ ಹಿಂದೂ ಜಾತ್ರಾ ಮಹೋತ್ಸವಗಳಲ್ಲಿ ಹಿಂದೂಗಳು ಮಾತ್ರ ವ್ಯಾಪಾರ ಮಾಡಬೇಕು. ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂಬ ವಿವಾದ ಏರ್ಪಟ್ಟಿತ್ತು. ಕರಾವಳಿ ಭಾಗದ ಹಲವು ಜಾತ್ರೆಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂಬ ಬ್ಯಾನರ್ ಕೂಡ ಅಳವಡಿಸಲಾಗಿತ್ತು.

ನಂತರ ಹಿಂದೂ ವ್ಯಾಪಾರಸ್ಥರು ಒಟ್ಟೂಗೂಡಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘಟನೆ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ರಾಜ್ಯದೆಲ್ಲೆಡೆ ಕಾಡಿಚ್ಚಿನಂತೆ ಅಭಿಯಾನ ಹರಡಿತ್ತು. ಇದೀಗ ಬಿಜೆಪಿ ಅಧ್ಯಕ್ಷರು ಸಂಘಟನೆಯನ್ನು ಅಧಿಕೃತವಾಗಿ ಉದ್ಘಾಟಿಸುವ ಮೂಲಕ ವಿವಾದ ಮತ್ತೊಮ್ಮೆ ಭುಗಿಲೇಳುವಂತಾಗಿದೆ.

ಹಿಂದೂ ವ್ಯಾಪಾರಸ್ಥರಿಗೆ ಠಕ್ಕರ್

ಈ ಹಿಂದೆ ಕರಾವಳಿಯ ಹಲವು ಜಾತ್ರಾ ಮಹೋತ್ಸವಗಳಲ್ಲಿ ಹಿಂದೂ ವ್ಯಾಪರಸ್ಥರಿಗೆ ಮಾತ್ರ ಅವಕಾಶ ಎಂಬ ಬ್ಯಾನರ್ ಅಳವಡಿಸಿದ ವೇಳೆ ಹಿಂದೂ ವ್ಯಾಪಾರಸ್ಥರ ಸಂಘಕ್ಕೆ ಠಕ್ಕರ್ ಕೊಡುವ ಕೊಡುವ ಸಲುವಾಗಿ ‘ಜಾತ್ರಾ’ (ದೇವಸ್ಥಾನಗಳ ಜಾತ್ರೆ) ವರ್ತಕರ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಈ ಸಂಘಟನೆಯಲ್ಲಿ ಹಿಂದೂ ,ಮುಸ್ಲಿಂ ಕ್ರೈಸ್ತ ವ್ಯಾಪಾರಸ್ಥರು ಒಳಗೊಂಡಿದ್ದರು. ಈ ಸಂಘಟನೆ ಜಾತ್ರಾ ಮಹೋತ್ಸವದಲ್ಲಿ ಎಲ್ಲಾ ವರ್ಗದವರಿಗೂ ಅವಕಾಶ ನೀಡಲು ಆಗ್ರಹಿಸಿತ್ತು.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *