No Horn Zone : ಇನ್ಮುಂದೆ ಮಂಗಳೂರಿನಲ್ಲಿ ಎಲ್ಲಾ ಕಡೆ ಹಾರ್ನ್ ಹಾಕುವಂತಿಲ್ಲ – ನಿಷೇಧಿತ ಪ್ರದೇಶಗಳು ಯಾವುವು ಗೊತ್ತಾ?

No Horn Zone : ಇನ್ಮುಂದೆ ಮಂಗಳೂರಿನಲ್ಲಿ ಎಲ್ಲಾ ಕಡೆ ಹಾರ್ನ್ ಹಾಕುವಂತಿಲ್ಲ – ನಿಷೇಧಿತ ಪ್ರದೇಶಗಳು ಯಾವುವು ಗೊತ್ತಾ?

ನ್ಯೂಸ್ ಆ್ಯರೋ : ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಈ ಕೆಳಕಂಡ ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No Horn Zone) ಎಂದು ಘೋಷಿಸಲಾಗಿದೆ.

ಘೋಷಿತ ಪ್ರದೇಶಗಳ ವಿವರ:-

1) ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :-
I. ರಾವ್ & ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
II. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ.
III. ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.

2) ಹಂಪನಕಟ್ಟೆ ಜಂಕ್ಷನ್‌:-

I. ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
II. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್ (Causality Gate) ನಿಂದ ಮುತ್ತಪ್ಪ ಗುಡಿಯ ವರೆಗೆ.
III. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದ ವರೆಗೆ.

3) ಡಾ. ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ:-

I. ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
II. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
III. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
IV. ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದ ವರೆಗೆ.

4) ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.

5) ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

6) ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.

ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ ರೂ 1000/- ದಂಡವನ್ನು ಹಾಗೂ ಎರಡನೆಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ ರೂ 2000/- ದಂಡವನ್ನು ವಿಧಿಸಲಾಗುವುದು.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *