ಪುತ್ತೂರು : ರಾಮಮಂದಿರದ ಅಕ್ಷತಾ ವಿತರಣೆ ಸಂಚಾಲಕನ ಮೇಲೆ ಹಲ್ಲೆ, ತಡೆಯಲು ಬಂದ ತಾಯಿ ಮೇಲೆಯೂ ದೌರ್ಜನ್ಯ – ಪುತ್ತಿಲ ಪರಿವಾರದ ಕಾರ್ಯಕರ್ತರಿಂದ ಹಲ್ಲೆ ಆರೋಪ, ಗಾಯಾಳುಗಳು ಆಸ್ಪತ್ರೆಗೆ ದಾಖಲು

ಪುತ್ತೂರು : ರಾಮಮಂದಿರದ ಅಕ್ಷತಾ ವಿತರಣೆ ಸಂಚಾಲಕನ ಮೇಲೆ ಹಲ್ಲೆ, ತಡೆಯಲು ಬಂದ ತಾಯಿ ಮೇಲೆಯೂ ದೌರ್ಜನ್ಯ – ಪುತ್ತಿಲ ಪರಿವಾರದ ಕಾರ್ಯಕರ್ತರಿಂದ ಹಲ್ಲೆ ಆರೋಪ, ಗಾಯಾಳುಗಳು ಆಸ್ಪತ್ರೆಗೆ ದಾಖಲು

ನ್ಯೂಸ್ ಆ್ಯರೋ : ಅಯೋಧ್ಯೆಯ ರಾಮ ಮಂದಿರ ಲೋರ್ಕಾರ್ಪಣೆಯ ನಿಮಿತ್ತ ಮನೆ ಮನೆಗೆ ಅಕ್ಷತೆಯನ್ನು ವಿತರಿಸುವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಈ ವೇಳೆ ರಾಮಮಂದಿರದ ಅಕ್ಷತಾ ವಿತರಣೆ ಸಂಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ರಾಮಮಂದಿರದ ಅಕ್ಷತೆ ವಿತರಣಾ ಸಂಚಾಲಕ ಸಂತೋಷ್ ಎಂಬುವವರು ಪುತ್ತೂರಿನ ಮುಂಡೂರು ಎಂಬಲ್ಲಿ ನಿನ್ನೆ ರಾತ್ರಿ ಮನೆ ಮನೆಗೆ ಅಕ್ಷತೆಯನ್ನು ವಿತರಿಸುತ್ತಿದ್ದರು‌.

ಈ ವೇಳೆ ನಿನ್ನೆ ಅಕ್ಷತೆ ಹಂಚಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಅಕ್ಷತೆಯನ್ನು ಸಂತೋಷ್ ಮನೆಮನೆಗೆ ಹಂಚುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ತಂಡ ಸಂತೋಷ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಹಲ್ಲೆ ನಡೆಸಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳೀಯ ನಿವಾಸಿ ಧನುಂಜಯ್ ಮತ್ತು ತಂಡ ಈ ಕೃತ್ಯ ಎಸಗಿದ್ದು, ಆರೋಪಿಗಳು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಈ ಹಲ್ಲೆಯನ್ನು ಖಂಡಿಸಿದ್ದು ಇದೊಂದು ರಾಜಕೀಯ ಪ್ರೇರಿತ ಹಲ್ಲೆ. ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರಕಾರ ಮತ್ತು ಪೋಲಿಸ್ ಇಲಾಖೆಯನ್ನು ಮಾಜಿ ಶಾಸಕರು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *