ಉಡುಪಿಯ ಪ್ರವಾಸಿ ತಾಣಗಳಿಗೆ ದಿಢೀರ್ ನಿರ್ಬಂಧ – ಜಿಲ್ಲಾಧಿಕಾರಿ ಆದೇಶಕ್ಕೆ ಕಾರಣವೇನು ಗೊತ್ತಾ?

ಉಡುಪಿಯ ಪ್ರವಾಸಿ ತಾಣಗಳಿಗೆ ದಿಢೀರ್ ನಿರ್ಬಂಧ – ಜಿಲ್ಲಾಧಿಕಾರಿ ಆದೇಶಕ್ಕೆ ಕಾರಣವೇನು ಗೊತ್ತಾ?

ನ್ಯೂಸ್ ಆ್ಯರೋ : ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಉಡುಪಿ ಜಿಲ್ಲೆಯ ಕೆಲವು ಸ್ಥಳಗಳನ್ನು ಮರೆಯುವಂತಿಲ್ಲ. ಧಾರ್ಮಿಕ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕರಾವಳಿ ತೀರದ ಉಡುಪಿ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ. ಆದರೆ ಇದೀಗ ಉಡುಪಿಯ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಸೆಪ್ಟೆಂಬರ್ 15ರ ವರೆಗೆ ಅಲ್ಲಿನ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ. ಈ ನಿರ್ಧಾರಕ್ಕೆ ಕಾರಣವೇನು ಗೊತ್ತಾ?

ಜಿಲ್ಲಾಧಿಕಾರಿ ಹೇಳಿದ್ದೇನು?

ಈ ದಿಢೀರ್ ನಿರ್ಬಂಧದ ಬಗ್ಗೆ ಮಾತನಾಡಿರುವ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ‘ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಸ್ತರಣೆ ಬಗ್ಗೆ ಅಧಿಕಾರಿಗಳೊಂದಿಗೂ ಚರ್ಚಿಸುತ್ತೇವೆ. ಜೊತೆಗೆ, ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧ ಹಿಂತೆಗೆದುಕೊಳ್ಳುವ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಮಾತು ಮುಂದುವರೆಸಿದ ಜಿಲ್ಲಾಧಿಕಾರಿಗಳು, ‘ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಮೇಲಿರುವ ಎಲ್ಲಾ ತಾತ್ಕಾಲಿಕ ನಿರ್ಬಂಧಗಳು ಸೆಪ್ಟೆಂಬರ್ 15 ರವರೆಗೆ ಮುಂದುವರಿಯುತ್ತವೆ. ಅದರ ನಂತರ ನಾವು ಆ ಸಮಯದಲ್ಲಿ ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ನಿರ್ಧಾರ ತೆಗೆದುಕೊಂಡು ಪ್ರವಾಸಿಗರಿಗೆ ಅನುವು ಮಾಡಿ ಕೊಡುತ್ತೇವೆ’ ಎಂದಿದ್ದಾರೆ.

ನಿರ್ಬಂಧಕ್ಕೆ ಕಾರಣವೇನು?

ಇತ್ತೀಚೆಗಷ್ಟೇ, ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿತ್ತು. ಇಂತಹ ಕೆಲವು ಘಟನೆಗಳ ನಂತರ ಎಚ್ಚೆತ್ತುಕೊಂಡಿರುವ ಉಡುಪಿ ಜಿಲ್ಲಾಡಳಿತ ಕಡಲತೀರಗಳು ಮತ್ತು ಇತರ ಅಪಾಯದ ಸ್ಥಳಗಳಿಗೆ ಪ್ರವಾಸಿಗರು ಭೇಟಿ ನೀಡುವುದಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಮುಂದುವರೆಯಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *