ಉಳ್ಳಾಲ : ಗೃಹ ಪ್ರವೇಶ ಮುಗಿಸಿ ಬರುತ್ತಿದ್ದ ನವವಿವಾಹಿತೆಗೆ ಕಾಡಿದ ವಿಧಿ – ಡಿವೈಡ‌ರ್ ನಿಂದ ನೆಗೆದು ಬಿದ್ದ ಬೈಕ್‌, ನವವಿವಾಹಿತೆ ದುರ್ಮರಣ

ಉಳ್ಳಾಲ : ಗೃಹ ಪ್ರವೇಶ ಮುಗಿಸಿ ಬರುತ್ತಿದ್ದ ನವವಿವಾಹಿತೆಗೆ ಕಾಡಿದ ವಿಧಿ – ಡಿವೈಡ‌ರ್ ನಿಂದ ನೆಗೆದು ಬಿದ್ದ ಬೈಕ್‌, ನವವಿವಾಹಿತೆ ದುರ್ಮರಣ

ನ್ಯೂಸ್ ಆ್ಯರೋ : ಮಂಗಳೂರು ಹೊರವಲಯದ ಅಸೈಗೋಳಿಯ ತಿಲ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ
ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಅಸೈಗೋಳಿಯ ತಿಲ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಅಪಘಾತದ ದೃಶ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಡ್ಯಾಷ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರಾದರೂ‌ ಸದ್ಯ ಅವರೂ ಕೂಡಾ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ನಿಧಿ ಅವರು ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಎಂಬವರ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ 7.25 ಸಮಯದಲ್ಲಿ ತಿಲ್ಲೆ ಪದವು ಎಂಬಲ್ಲಿ ಅಪಘಾತ ನಡೆದಿದೆ.

ಅತಿ ವೇಗದಿಂದ ಧಾವಿಸುತ್ತಿದ್ದ ಬೈಕ್ ಡಿವೈಡರ್ ನೆಗೆದು ಪಕ್ಕದ ರಸ್ತೆಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಬೈಕ್ ಚಾಲಕ ಯತೀಶ್ ಮತ್ತು ಸಹ ಸವಾರೆ ನಿಧಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಅಪಘಾತ ಸಂದರ್ಭದಲ್ಲಿ ಇನ್ನೊಂದು ಬದಿಯ ರಸ್ತೆಗೆ ಮಹಿಳೆ ಮತ್ತು ಯುವಕ ಬಿದ್ದಿದ್ದು ಒಬ್ಬರ ಮೇಲಿನಿಂದಲೇ ಕಾರು ಚಲಿಸಿರುವ ಸಾಧ್ಯತೆಯಿದೆ. ಬೈಕ್ ಮತ್ತು ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದರೂ ಕಾರು ಚಾಲಕ ನೇರವಾಗಿ ಚಲಿಸಿದ್ದು ಹಿಂಬದಿಯ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *