ಉಳ್ಳಾಲ : ಅಂಕ ಸರಿ ನೀಡಿಲ್ಲವೆಂದು ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ 6 ನೇ ಕ್ಲಾಸ್ ಬಾಲಕಿಯರು – ಇಬ್ಬರು ಶಿಕ್ಷಕಿಯರು ಅಸ್ವಸ್ಥ, ಶಾಲಾ ಆಡಳಿತ ಮಂಡಳಿಗೆ ಬಿಗ್ ಶಾಕ್..!

ಉಳ್ಳಾಲ : ಅಂಕ ಸರಿ ನೀಡಿಲ್ಲವೆಂದು ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ 6 ನೇ ಕ್ಲಾಸ್ ಬಾಲಕಿಯರು – ಇಬ್ಬರು ಶಿಕ್ಷಕಿಯರು ಅಸ್ವಸ್ಥ, ಶಾಲಾ ಆಡಳಿತ ಮಂಡಳಿಗೆ ಬಿಗ್ ಶಾಕ್..!

ನ್ಯೂಸ್ ಆ್ಯರೋ : ಉತ್ತರ ಪತ್ರಿಕೆಯ ಮೌಲ್ಯಮಾಪನ ಮಾಡುವ ವೇಳೆ ಸರಿಯಾಗಿ ಅಂಕ ನೀಡಿಲ್ಲವೆಂದು ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್ ಬಾಟಲ್‌ಗೆ ಎಕ್ಸ್‌ಪೈರಿ ಡೇಟ್ ಮುಗಿದ ಮಾತ್ರೆ ಹಾಕಿದ ಘಟನೆ ಉಳ್ಳಾಲ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಆ ನೀರನ್ನು ಸೇವಿಸಿದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.

ಆರನೇ ತರಗತಿ ವಿದ್ಯಾರ್ಥಿನಿಯರು ಈ ಕೃತ್ಯ ಎಸಗಿದ್ದು 10- 11 ವರ್ಷ ವಯಸ್ಸಿನ ಮಕ್ಕಳ ಮನಸ್ಸಿನಲ್ಲಿ ಇಷ್ಟೊಂದು ದ್ವೇಷ ಉತ್ಪತ್ತಿಯಾಗಿರುವುದು ಹೇಗೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿನಿಯರ ಈ ಬೆಚ್ಚಿ ಬೀಳಿಸುವ ಕೃತ್ಯಕ್ಕೆ ಶಾಲಾ ಆಡಳಿತ ಮಂಡಳಿ, ಹೆತ್ತವರು, ಶಿಕ್ಷಕ ವರ್ಗ ಆಘಾತಕ್ಕೆ ಒಳಗಾಗಿದೆ.

ಶಾಲಾ ಯುನಿಟ್ ಟೆಸ್ಟ್‌ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೆ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಎಂಬ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು.

ಇದರ ಸೇಡು ತೀರಿಸುವ ಸಲುವಾಗಿ ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ಆರನೇ ತರಗತಿ ವಿದ್ಯಾರ್ಥಿನಿ, ಸ್ಟಾಫ್ ರೂಮ್‌ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಎಲ್ಲಿಂದಲೋ ತಂದಿದ್ದ ಅವಧಿ ಮೀರಿದ ಮಾತ್ರೆಗಳನ್ನು ಗಣಿತ ಶಿಕ್ಷಕಿಗೇ ಸೇರಿದ ವಾಟರ್ ಬಾಟಲಿಗೆ ಹಾಕಿದ್ದಾರೆ.

ಇಂತಹ ದೃಶ್ಯವನ್ನು ಬೇರೆ ಎಲ್ಲಿಯಾದರೂ ಮಾಡಿರುವುದನ್ನು ಕಂಡು ಕೃತ್ಯ ಎಸಗಿದರೋ? ಅಥವಾ ಯಾರಾದರೂ ಹೇಳಿಕೊಟ್ಟರೇ ಎಂಬ ಅನುಮಾನ ಪೋಷಕರಿಗೆ ಮೂಡಿದೆ. ಘಟನೆ ಸಂಬಂಧ ಶಾಲೆಯಲ್ಲಿ ತುರ್ತು ಎಸ್‌ಡಿಎಂಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಅಷ್ಟಕ್ಕೂ ಟಿ.ಸಿ. ಕೊಟ್ಟು ಕಳುಹಿಸಿದರೆ ಅವರಲ್ಲಿ ಮಾರ್ಪಾಡು ಸಾಧ್ಯವೇ, ಅದಕ್ಕಿಂತಲೂ ಕೌನ್ಸಿಲಿಂಗ್ ಮಾಡಿಸಿ ಸರಿಪಡಿಸಲು ಸಾಧ್ಯವಾಗದೇ ಎಂಬ ಪ್ರಶ್ನೆಯೂ ಪೋಷಕರಿಂದ ವ್ಯಕ್ತವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *