ಕಿನ್ನಿಗೋಳಿ : ನಾಗರಹಾವಿನ ಮೇಲೆ ಡೀಸೆಲ್ ಎರಚಿದಾತನಿಗೆ ಮೈ ಉರಿ, ಆಸ್ಪತ್ರೆಗೆ ದಾಖಲು – ನಾಗದೇವರ ಶಾಪವೆಂದ ಭಕ್ತರು, ಏನಿದು ಘಟನೆ?

ಕಿನ್ನಿಗೋಳಿ : ನಾಗರಹಾವಿನ ಮೇಲೆ ಡೀಸೆಲ್ ಎರಚಿದಾತನಿಗೆ ಮೈ ಉರಿ, ಆಸ್ಪತ್ರೆಗೆ ದಾಖಲು – ನಾಗದೇವರ ಶಾಪವೆಂದ ಭಕ್ತರು, ಏನಿದು ಘಟನೆ?

ನ್ಯೂಸ್ ಆ್ಯರೋ‌ : ಕರಾವಳಿ ಜನರಿಗೆ ನಾಗದೇವರ ಮೇಲಿನ ಭಕ್ತಿ ಅಪಾರ. ಹಾಗೆಯೇ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅದೆಷ್ಟೋ ಮಂದಿ ಸೆಲೆಬ್ರಿಟಿಗಳು ಭೇಟಿ ನೀಡಿ ನಾಗದೇವರ ಕೃಪೆಗೆ ಪಾತ್ರವಾಗಿ ಜೀವನದಲ್ಲಿ ಸಕ್ಸಸ್ ಕಂಡ ಹಲವು ಪ್ರಕರಣಗಳಿವೆ. ಬಹುಜನರ ಆರಾಧನೆಯ ನಾಗನ ಮೂರ್ತರೂಪದಂತೆ ಆರಾಧಿಸುವ ನಾಗರಹಾವಿಗೆ ಡೀಸೆಲ್‌ ಎರಚಿದಾತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.

ಏನಿದು ಘಟನೆ?

ಮಂಗಳೂರಿನ ಹೊರವಲಯದ ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡು ಬಂದಿದ್ದು ಇದನ್ನು ಕಂಡ ಕಟ್ಟಡದ ಕಾವಲುಗಾರ ನಾಗರ ಹಾವಿಗೆ ಡೀಸೆಲ್ ಎರಚಿದ್ದ. ಇದರಿಂದಾಗಿ ಮೈ ಉರಿಯಿಂದ ನಾಗರ ಹಾವು ಒದ್ದಾಡತೊಡಗಿದಾಗ, ಸ್ಥಳೀಯರು ಇದನ್ನು ಕಂಡು ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ತಿಳಿಸಿದ್ದರು.

ಬಳಿಕ ಯತೀಶ್ ಕಟೀಲು ಅವರು ಸ್ಥಳಕ್ಕೆ ಆಗಮಿಸಿ ಶ್ಯಾಂಪು ಮೂಲಕ ಅದನ್ನು ತೊಳೆದು ಸಹಜ ಸ್ಥಿತಿಗೆ ಬಂದ ನಂತರ ಕಾಡಿಗೆ ಬಿಟ್ಟಿದ್ದಾರೆ, ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈ ಉರಿಯಿಂದ ಬಳಲಲು ಪ್ರಾರಂಭಿಸಿದ್ದಾನೆ ಎನ್ನಲಾಗಿದೆ.

ಸದ್ಯ ಆತನ ಸಂಬಂಧಿಕರು ಕಾವಲುಗಾರನ ಊರು ಉತ್ತರ ಕರ್ನಾಟಕಕ್ಕೆ ಆತನನ್ನು ಕರೆದೊಯ್ದಿದ್ದು ಇದೀಗ ಅಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ಎಂದು ಉರಗ ರಕ್ಷಕ ಯತೀಶ್ ಕಟೀಲು ತಿಳಿಸಿದ್ದಾರೆ. ಈ ಘಟನೆಯನ್ನು ಕೆಲವರಂತೂ ನಾಗದೇವರ ಶಾಪ ಎಂದು ಮಾತನಾಡಲು ಆರಂಭಿಸಿದ್ದು, ನಾಗದೇವರ ಮೇಲೆ ಕಾವಲುಗಾರನಿಗೆ ಈಗ ಭಕ್ತಿ ಬಂದಿರಬಹುದು ಎಂದು ಅಣಕವಾಡಿದ್ದಾರೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *