ಸೌಜನ್ಯಾ ಮನೆಯಿಂದ ಬೆಂಗಳೂರಿಗೆ ಮೂರು ದಿನಗಳ ಪಾದಯಾತ್ರೆ – ನ್ಯಾಯಕ್ಕಾಗಿ ಸರ್ಕಾರದ ಗಮನ ಸೆಳೆಯಲು ತ್ರಿಶೂಲ್ ಸೇನೆಯಿಂದ ವಿಭಿನ್ನ ಪ್ರಯತ್ನ

ಸೌಜನ್ಯಾ ಮನೆಯಿಂದ ಬೆಂಗಳೂರಿಗೆ ಮೂರು ದಿನಗಳ ಪಾದಯಾತ್ರೆ – ನ್ಯಾಯಕ್ಕಾಗಿ ಸರ್ಕಾರದ ಗಮನ ಸೆಳೆಯಲು ತ್ರಿಶೂಲ್ ಸೇನೆಯಿಂದ ವಿಭಿನ್ನ ಪ್ರಯತ್ನ

ನ್ಯೂಸ್ ಆ್ಯರೋ : ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಸೌಜನ್ಯಾ ಪರ ನ್ಯಾಯಕ್ಕಾಗಿ ಬರೋಬ್ಬರಿ 305 ಕಿಮಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಉಜಿರೆಯಿಂದ ಬೆಂಗಳೂರಿಗೆ ತ್ರಿಶೂಲ್ ಸೇನೆ ಪಾದಯಾತ್ರೆಯನ್ನು ಕೈಗೊಂಡಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಪಾಂಗಳದಲ್ಲಿರುವ ಸೌಜನ್ಯಾ ಮನೆಯಿಂದ ಇಂದು ಪಾದಯಾತ್ರೆ ಪ್ರಾರಂಭಗೊಂಡಿದೆ.

ಸೌಜನ್ಯಾ ಪೋಷಕರಿಂದ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು, ಉಜಿರೆಯಿಂದ ಬೆಂಗಳೂರಿನ ವಿಧಾನ ಸೌಧದವರೆಗೂ ಕಾಲ್ನಡಿಗೆಯಲ್ಲಿ ನಿರಂತರ 3 ದಿನ ಪಾದಯಾತ್ರೆ ಕೈಗೊಂಡು ಸೌಜನ್ಯ ಪ್ರಕರಣಕ್ಕೆ ನ್ಯಾಯ ದೊರಕಿಸಲು ತ್ರಿಶೂಲ್ ಸೇನೆಯಿಂದ ಸರಕಾರಕ್ಕೆ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ನಡೆಯಲಿದೆ.

ದಿನದಿಂದ ದಿನಕ್ಕೆ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀವ್ರತೆ ಪಡೆಯುತ್ತಿದ್ದು, ಹೋರಾಟದ ಕಿಚ್ಚು ರಾಜ್ಯವ್ಯಾಪಿ ವ್ಯಾಪಿಸುತ್ತಿದೆ. ಇದೇ ತಿಂಗಳ ಆಗಸ್ಟ್ 27 ರಂದು ದ. ಕ ಹಾಗೂ ಉಡುಪಿ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಲಿದೆ ಹಾಗೂ ಆಗಸ್ಟ್ 28ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ಚಲೋ ಕಾರ್ಯಕ್ರಮ ನಡೆಯಲಿದ್ದು ವಿವಿಧ ಜನ ಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಸರಕಾರಕ್ಕೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಆಗ್ರಹವೂ ಕೇಳಿ ಬರಲಿದೆ.

ವಿಡಿಯೋ ನೋಡಿ

ಅಲ್ಲದೇ ಸತತ 11 ವರ್ಷಗಳಿಂದ ಸೌಜನ್ಯಾ ಪರ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಂಘಟನೆಯಿಂದ ಸೆಪ್ಟೆಂಬರ್ 3 ರಂದು ಬೃಹತ್ ಪ್ರತಿಭಟನೆ ಹಾಗೂ ಹಕ್ಕೊತ್ತಾಯ ಕಾರ್ಯಕ್ರಮವೂ ನಡೆಯಲಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *