ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

Karnataka Yellow Alert
Spread the love

ನ್ಯೂಸ್ ಆ್ಯರೋ: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಡೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾಗಿದ್ದ ಮಳೆ ಭಾನುವಾರ ಬೆಳಗಿನಜಾವದವರೆಗೂ ಸುರಿದಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿ ತತ್ತರಿಸಿದೆ. ರಾತ್ರಿಯಿಂದ ಸುರಿದ ಭಾರೀ ಮಳೆಗೆ ಬೆಂಗಳೂರು ಸ್ತಬ್ಧವಾಗಿದೆ. ಸಂಜೆಯಿಂದ ಜೋರು ಮಳೆ ಬಿದ್ದಿದ್ದು ಹಲವು ಕಡೆ ಜನಜೀವನ ತೀವ್ರ ಸಂಕಷ್ಟಕ್ಕೆ ಒಳಗಾದರು. ಭಾರೀ ಮಳೆಗೆ ಬೆಂಗಳೂರಿನ ಬಹುತೇಕ ರಸ್ತೆಗಳು ಜಲಾವೃತವಾಗಿವೆ. ಮಲ್ಲೇಶ್ವರಂ, ಶಾಂತಿನಗರ, ರಾಜಾಜಿನಗರ, ವೈಟ್​ಫೀಲ್ಡ್​, ಮೆಜೆಸ್ಟಿಕ್​, ಕೆಆರ್​ ಮಾರ್ಕೆಟ್​ ಸೇರಿದಂತೆ ಹಲವು ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದರು. ಮಡಿವಾಳ ಕೆಳಸೇತುವೆ ಜಲಾವೃತವಾಗಿದ್ದರಿಂದ ಜನರು ಅಕ್ಷರಶಃ ಸಂಕಷ್ಟ ಅನುಭವಿಸಿದರು.

Leave a Comment

Leave a Reply

Your email address will not be published. Required fields are marked *

error: Content is protected !!