ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳಿಗೂ ಪೋಷಕರ ಪಾಲು – ಮಹತ್ವದ ತೀರ್ಪು ಹೊರಡಿಸಿದ ಸುಪ್ರೀಂಕೋರ್ಟ್‌

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳಿಗೂ ಪೋಷಕರ ಪಾಲು – ಮಹತ್ವದ ತೀರ್ಪು ಹೊರಡಿಸಿದ ಸುಪ್ರೀಂಕೋರ್ಟ್‌

ನ್ಯೂಸ್‌ ಆ್ಯರೋ : ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳಿಗೂ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.

ಹಿಂದೂ ಕಾನೂನಿನಲ್ಲಿ ಅನೂರ್ಜಿತ ಸಂಬಂಧದಿಂದ ಜನಿಸಿದ ಮಕ್ಕಳು ಹೆತ್ತವರ ಆಸ್ತಿಯನ್ನು ಪಡೆಯಲು ಅರ್ಹರೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ 2011ರ ಅರ್ಜಿಯ ಮೇಲಿನ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಕೈಗೆತ್ತಿಕೊಂಡಿತ್ತು. ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ​ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಕೂಡ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಕಾನೂನು ಸಮ್ಮತ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3)ರಲ್ಲಿ ತಮ್ಮ ಪೋಷಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೇ ಹಕ್ಕಿದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿತ್ತು.

ಮಾನ್ಯವಾದ ಅಥವಾ ಅಮಾನ್ಯವಾದ ಯಾವುದೇ ವಿವಾಹದ ನಂತರ ಜನಿಸಿದ ಮಗು ಮಾತ್ರ ತನ್ನ ಹೆತ್ತವರ ಆಸ್ತಿ ಮೇಲೆ ಹಕ್ಕು ಇರುತ್ತದೆ, ಬೇರೆ ಯಾರಿಗೂ ಇಲ್ಲ ಎಂಬುದು ನಿಬಂಧನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಂತಹ ಮಕ್ಕಳಿಗೆ ಆಸ್ತಿಯಲ್ಲಿ ಯಾವುದೇ ಪಾಲಿಲ್ಲ ಎನ್ನುವ ಉನ್ನತ ನ್ಯಾಯಾಲಯದ ಹಿಂದಿನ ಉಲ್ಲೇಖಗಳನ್ನು ನ್ಯಾಯಪೀಠ ಒಪ್ಪಲಿಲ್ಲ.

ನಮ್ಮನ್ನೂ ಸೇರಿದಂತೆ ಸಮಾಜದಲ್ಲಿ ನ್ಯಾಯಾ ವ್ಯವಸ್ಥೆಯ ಸಾಮಾಜಿಕ ನಿಯಮಗಳು ದಿನಕಳೆದಂತೆ ಬದಲಾಗುತ್ತಿರುವುದರಿಂದ ಹಿಂದೆ ಕಾನೂನು ಬಾಹಿರ ಎನಿಸಿಕೊಂಡಿರುವುದು ಇಂದು ನ್ಯಾಯಸಮ್ಮತವಾಗಬಹುದು. ಅನೂರ್ಜಿತ ವಿವಾಹ ಸಂಬಂಧದಲ್ಲಿ ಮಹಿಳೆ ಮತ್ತು ಪುರುಷ ಗಂಡ ಮತ್ತು ಹೆಂಡತಿಯ ಸ್ಥಾನಮಾನವನ್ನು ಹೊಂದಿರುವುದಿಲ್ಲ. ಶಾಸನದ ಪ್ರಕಾರ ಅನೂರ್ಜಿತ ವಿವಾಹದಲ್ಲಿ ಗಂಡ ಹಾಗೂ ಹೆಂಡತಿಗೆ ಸ್ಥಾನಮಾನವಿದೆ ಎಂದು ಹೇಳಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *