ಆರ್ಗ್ಯಾನಿಕ್ ಚೀಲದ ನೆಪದಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಬೆಳ್ತಂಗಡಿ ಮೂಲದ ಅಶ್ವತ್ಥ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಆರ್ಗ್ಯಾನಿಕ್ ಚೀಲದ ನೆಪದಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಬೆಳ್ತಂಗಡಿ ಮೂಲದ ಅಶ್ವತ್ಥ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ‌ : ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ (EnviGreen Biotech) ಮಾಲೀಕ ಅಶ್ವತ್ಥ್​ ಹೆಗ್ಡೆ ವಿರುದ್ಧ ಉದ್ಯಮಿ ನೀಲಿಮಾ ಎಂಬವರ ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ್​ ಹೆಗ್ಡೆ, ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ ಕೊಡುವುದಾಗಿ ಹೇಳಿದ್ದರು ಎಂಬುದಾಗಿ ನೀಲಿಮಾ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಅಶ್ವತ್ಥ್ ಹೆಗ್ಡೆಗೆ 74 ಲಕ್ಷ ರೂಪಾಯಿ ಹಣವನ್ನು ದೂರುದಾರೆ ನೀಲಿಮಾ ನೀಡಿದ್ದರು. ಆದರೆ, 5 ಲಕ್ಷ ರೂಪಾಯಿ ಮೌಲ್ಯದ ಯಂತ್ರ ಕೊಟ್ಟು ಅಶ್ವತ್ಥ್ ಹೆಗ್ಡೆ ಮೋಸ ಮಾಡಿದ್ದಾರೆ. ತಯಾರಿಕಾ‌ ಜ್ಞಾನವೇ ಇಲ್ಲದ ಕಾರ್ಮಿಕರನ್ನು ನೀಡಿದ್ದಾರೆ. ಆರ್ಗ್ಯಾನಿಕ್ ಬ್ಯಾಗ್ ತಯಾರಿಕೆಗೆ ಕಚ್ಚಾ ವಸ್ತು ಸಹ ನೀಡಲಿಲ್ಲ ಎಂದು ಆರೋಪಿಸಲಾಗಿದೆ.

ವಂಚನೆ ವಿಚಾರವಾಗಿ ಪ್ರಶ್ನೆ ಮಾಡಿದಾಗ ಹೊಸ ಯಂತ್ರ ಕೊಡಿಸುವುದಾಗಿ ನಂಬಿಸಿದ್ದರು. ಆ್ರ ನಂತರ ಯಂತ್ರ ಕೊಡದೇ, ಹಣವನ್ನೂ ವಾಪಸ್ ಕೊಡದೆ ವಂಚನೆ ಎಸಗಿದ್ದಾರೆ ಎಂದು ನಿಲೀಮಾ ದೂರು ನೀಡಿದ್ದರು.

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *